ಮೂಡುಬಿದಿರೆ: ಅಭಯಚಂದ್ರ ಜೈನ್ ನಾಮಪತ್ರ ಸಲ್ಲಿಕೆ

Update: 2018-04-19 15:21 GMT

ಮೂಡುಬಿದಿರೆ, ಎ.19: ಮುಲ್ಕಿ-ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಹಾಲಿ ಶಾಸಕ, ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಗುರುವಾರ ನಾಮಪತ್ರ ಸಲ್ಲಿಸಿದರು.

ಸಮಾಜಮಂದಿರ ಆವರಣದಿಂದ ಕಾರ್ಯಕರ್ತರೊಂದಿಗೆ ಮೂಡುಬಿದಿರೆ ತಹಸೀಲ್ದಾರ್ ಕಚೇರಿಯವರೆಗೆ ಕಾಲ್ನಡಿಗೆ ಜಾಥ ನಡೆಸಿ, ಚುನಾವಣಾಧಿಕಾರಿ ಪ್ರಸನ್ನ ಅವರಿಗೆ ನಾಮಪತ್ರ ಸಲ್ಲಿಸಿದರು.

ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಲೇರಿಯನ್ ಸಿಕ್ವೇರಾ, ಕಾರ್ಯದರ್ಶಿ ರತ್ನಾಕರ ಸಿ.ಮೊಯಿಲಿ, ಮೂಲ್ಕಿ ಬ್ಲಾಕ್ ಅಧ್ಯಕ್ಷ ಧನಂಜಯ ಮಟ್ಟು, ಜೆ.ಎಂ ಹಾಜಿ ಜೋಕಟ್ಟೆ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News