ಮುಖ್ಯಮಂತ್ರಿ ಸಿದ್ದರಾಮಯ್ಯ ಎ.23 ಕ್ಕೆ ಬಾದಾಮಿಯಿಂದ ನಾಮಪತ್ರ?

Update: 2018-04-20 13:12 GMT

ಬೆಂಗಳೂರು, ಎ. 20: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಜತೆಗೆ ಬಾಗಲಕೋಟೆಯ ಬಾದಾಮಿ ಕ್ಷೇತ್ರದಿಂದಲೂ ಕಣಕ್ಕಿಳಿಯುವುದು ಖಚಿತವಾಗಿದ್ದು, ಬಾದಾಮಿ ಕ್ಷೇತ್ರದಿಂದ ಎ.23 ಕ್ಕೆ ನಾಪತ್ರ ಸಲ್ಲಿಸಲಿದ್ದಾರೆಂದು ಸಿಎಂ ಪುತ್ರ ಡಾ.ಯತೀಂದ್ರ ಖಚಿತಪಡಿಸಿದ್ದಾರೆ.

ಸಿದ್ದರಾಮಯ್ಯ ಚಾಮುಂಡೇಶ್ವರಿ ಮತ್ತು ಬಾದಾಮಿ ಎರಡೂ ಕ್ಷೇತ್ರಗಳಿಂದ ಸ್ಪರ್ಧಿಸಲಿದ್ದಾರೆಂದು ಅವರ ಪುತ್ರ ಡಾ.ಯತೀಂದ್ರ ತಮ್ಮ ಫೇಸ್‌ಬುಕ್‌ನಲ್ಲಿ ಬರೆದು ಕೊಂಡಿದ್ದಾರೆ. ತಮ್ಮ ತಂದೆ ಎರಡೂ ಕ್ಷೇತ್ರಗಳಿಂದ ಕಣಕ್ಕಿಳಿಯುವುದು ನಿಶ್ಚಿತ ಎಂದು ಪ್ರಕಟಿಸಿರುವುದು ಕುತೂಹಲಕ್ಕೆ ಕಾರಣವಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News