ಕಾಂಗ್ರೆಸ್‌ಗೆ 130 ಕ್ಕೂ ಹೆಚ್ಚು ಸ್ಥಾನಗಳು ನಿಶ್ಚಿತ: ಕೆ.ಸಿ.ವೇಣುಗೋಪಾಲ್

Update: 2018-04-21 13:03 GMT

ಬೆಂಗಳೂರು, ಎ.21: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರ ಮಾಡಿರುವ ಜನಪರ ಕಾರ್ಯಕ್ರಮಗಳು ಜನರಿಗೆ ತಲುಪಿದ್ದು, ಇದರ ಫಲವಾಗಿ ಈ ಬಾರಿಯ ಚುನಾವಣೆಯಲ್ಲಿ 130ಕ್ಕೂ ಹೆಚ್ಚು ಸ್ಥಾನಗಳು ಬರಲಿವೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅಭಿಪ್ರಾಯಿಸಿದರು.

ನಗರದ ಶನಿವಾರ ನಗರದ ಅಶೋಕ ಹೊಟೇಲ್‌ನಲ್ಲಿ ಕಾಂಗ್ರೆಸ್ ವತಿಯಿಂದ ವಿಧಾನಸಭಾ ಚುನಾವಣಾ ಪ್ರಚಾರಕ್ಕಾಗಿ ವಿಶೇಷ ತಂತ್ರಜ್ಞಾನದೊಂದಿಗೆ ಸಿದ್ಧಗೊಂಡಿರುವ ‘ಆಗ್ಮೆಂಟೆಡ್ ರಿಯಾಲಿಟಿ’ ಆ್ಯಪ್‌ನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ಕಳೆದ ಬಾರಿಯ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಶೇ.95 ರಷ್ಟು ಭರವಸೆಯನ್ನು ಈಡೇರಿಸಿದ್ದೇವೆ. ಹೀಗಾಗಿ ಜನತೆ ನಮಗೆ ಮತ್ತೊಮ್ಮೆ ಅಧಿಕಾರ ಕೊಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯದ ಜನತೆ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಆಡಳಿತವನ್ನು ಹೋಲಿಸಿ ನೋಡಲಿ. ಬಿಜೆಪಿ ಆಡಳಿತದಲ್ಲಿ ಭ್ರಷ್ಟಾಚಾರ ಹಾಗೂ ಬಿಜೆಪಿ ನಾಯಕರ ಜೈಲುವಾಸ ಪ್ರಕರಣಗಳನ್ನು ಜನತೆ ಮರೆತಿಲ್ಲ. ಹೀಗಾಗಿ ಕಾಂಗ್ರೆಸ್‌ನ ಅಭಿವೃದ್ಧಿಪರ ಕಾರ್ಯಕ್ರಮಗಳಿಗೆ ಮತ ಹಾಕಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News