ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ನಟಿ ರಮ್ಯಾ

Update: 2018-04-21 14:33 GMT

ಬೆಂಗಳೂರು, ಎ.21: ಮಂಡ್ಯ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಮಾಜಿ ಸಚಿವ ಅಂಬರೀಶ್ ಹಿಂದೇಟು ಹಾಕುತ್ತಿರುವ ವಿಚಾರ ಈಗಾಗಲೆ ಕಾಂಗ್ರೆಸ್ ಪಾಲಿಗೆ ಕಗ್ಗಂಟಾಗಿ ಪರಿಣಮಿಸಿದೆ. ಅಂಬರೀಶ್ ಮನವೊಲಿಕೆಗೆ ಸಚಿವ ಕೆ.ಜೆ.ಜಾರ್ಜ್ ಸೇರಿದಂತೆ ಇನ್ನಿತರರು ಮನವೊಲಿಸುವ ಪ್ರಯತ್ನದಲ್ಲಿದ್ದಾರೆ.

ಅಂಬರೀಶ್ ಬದಲು ತಾವು ಮಂಡ್ಯದಿಂದ ಸ್ಪರ್ಧಿಸುತ್ತಿರುವುದಾಗಿ ಹರಿದಾಡುತ್ತಿರುವ ಸುದ್ದಿಗಳಿಗೆ ‘ನಾನು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ’ ಎಂದು ಮಾಜಿ ಸಂಸದೆ ಹಾಗೂ ಎಐಸಿಸಿ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥೆ ರಮ್ಯಾ ಟ್ವಿಟ್ ಮೂಲಕ ಸ್ಪಷ್ಟಣೆ ನೀಡಿದ್ದಾರೆ.

ಸಚಿವ ಸಂಪುಟ ಪುನರ್ ರಚನೆ ಸಂದರ್ಭದಲ್ಲಿ ತಮ್ಮನ್ನು ಸಚಿವ ಸ್ಥಾನದಿಂದ ಕೈ ಬಿಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆಯಿಂದ ಬೇಸರಗೊಂಡಿರುವ ಅಂಬರೀಶ್, ಕಾಂಗ್ರೆಸ್ ಟಿಕೆಟ್ ಘೋಷಣೆಯಾಗಿ, ಬಿ.ಫಾರಂ ಕೈ ಸೇರಿದ್ದರೂ ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂಬ ಸಂದೇಶವನ್ನು ತಮ್ಮ ಆಪ್ತರ ಮೂಲಕ ಕಾಂಗ್ರೆಸ್ ನಾಯಕರಿಗೆ ತಲುಪಿಸಿದ್ದಾರೆ ಎಂದು ತಿಳಿದು ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News