​ಮೂಡುಬಿದಿರೆ: ರಸ್ತೆ ಅಪಘಾತ; ಗಾಯಾಳು ಮೃತ್ಯು

Update: 2018-04-21 14:54 GMT

ಮೂಡುಬಿದಿರೆ, ಎ. 21: ಗಂಟಲ್ ಕಟ್ಟೆ ಚೆಕ್‌ಪೋಸ್ಟ್ ಬಳಿ ಬೈಕ್‌ಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೂಲಿ ಕಾರ್ಮಿಕ ಶನಿವಾರ ಬೆಳಗ್ಗೆ ಮೃತಪಟ್ಟಿದ್ದಾರೆ.

ಮೃತ ವ್ಯಕ್ತಿಯನ್ನು ಕಲ್ಲಬೆಟ್ಟು ಗ್ರಾಮದ ನೀರಲ್ಕೆ ನಿವಾಸಿ ಮುಹಮ್ಮದ್ ಶರೀಫ್ (39) ಎಂದು ಗುರುತಿಸಲಾಗಿದೆ. ಶುಕ್ರವಾರ ರಾತ್ರಿ ಅವರು ತನ್ನ ಮನೆಯಿಂದ ಮೂಡುಬಿದಿರೆಗೆ ಬೈಕ್‌ನಲ್ಲಿ ಹೋಗುತ್ತಿದ್ದಾಗ ಮೂಡುಬಿದಿರೆಯಿಂದ ವೇಣೂರು ಕಡೆಗೆ ಹೋಗುತ್ತಿದ್ದ ಕಾರು ಗಂಟಾಲ್‌ಕಟ್ಟೆ ಪೊಲೀಸ್ ಚೆಕ್ ಪೋಸ್ಟ್ ಬಳಿ ಬೈಕ್‌ಗೆ ಢಿಕ್ಕಿ ಹೊಡೆದಿತ್ತು. ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಮುಹಮ್ಮದ್ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರು ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಮೃತಪಟ್ಟಿದ್ದಾರೆ.

ವಿವಾಹಿತರಾಗಿದ್ದ ಶರೀಫ್ ಅವರಿಗೆ ಮೂವರು ಹೆಣ್ಣು ಮಕ್ಕಳಿದ್ದಾರೆ. ಕಾರು ಚಾಲಕ ವಿಜಯ ಗೌಡ ವಿರುದ್ಧ ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿ, ತನಿಖೆ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News