ಶಿವಮೊಗ್ಗ: ಕಾಳಸಂತೆಯಲ್ಲಿ ಮಾರಾಟಕ್ಕೆ ಕೊಂಡೊಯ್ಯುತ್ತಿದ್ದ ಅನ್ನಭಾಗ್ಯದ ಅಕ್ಕಿ ವಶ

Update: 2018-04-21 15:39 GMT

ಶಿವಮೊಗ್ಗ, ಎ. 21: ಬಿಪಿಎಲ್ ಪಡಿತರ ಚೀಟಿದಾರರಿಗೆ ವಿತರಣೆ ಮಾಡಬೇಕಾದ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲು ಕೊಂಡೊಯ್ಯುತ್ತಿದ್ದ ಆರೋಪದ ಮೇರೆಗೆ ಪೊಲೀಸರು ಆಟೋ ಸಮೇತ ಅಕ್ಕಿ ವಶಕ್ಕೆ ಪಡೆದ ಘಟನೆ ನಗರದ ಮಾರ್ನಾಮಿಬೈಲು 2 ನೇ ತಿರುವಿನಲ್ಲಿ ನಡೆದಿದೆ. 

ಖಚಿತ ವರ್ತಮಾನದ ಮೇರೆಗೆ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಆಟೋದಲ್ಲಿ ಅಕ್ಕಿ ಕೊಂಡೊಯ್ಯುತ್ತಿದ್ದ ಇಬ್ಬರು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ತಲಾ 40 ಕೆ.ಜಿ. ತೂಕದ 3600 ರೂ. ಮೌಲ್ಯದ ಅಕ್ಕಿ ಚೀಲಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News