ಟಿಪ್ಪರ್ ಢಿಕ್ಕಿ: ಬೈಕ್ ಸವಾರ ಮೃತ್ಯು

Update: 2018-04-21 17:04 GMT

ಕುಂದಾಪುರ, ಎ.21: ತಲ್ಲೂರು ಗ್ರಾಮದ ಪ್ರವಾಸಿ ಹೋಟೆಲ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಎ.21ರಂದು ಟಿಪ್ಪರೊಂದು ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಬಗ್ಗೆ ವರದಿಯಾಗಿದೆ.

ಮೃತರನ್ನು ಬೈಕ್ ಸವಾರ ಯೊಗೀಶ್ ಎಂದು ಗುರುತಿಸಲಾಗಿದೆ. ಬೈಂದೂರು ಕಡೆಯಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ಟಿಪ್ಪರ್, ಎದುರಿನಲ್ಲಿದ್ದ ಬೈಕಿಗೆ ಹಿಂದಿನಿಂದ ಢಿಕ್ಕಿ ಹೊಡೆಯಿತೆನ್ನಲಾಗಿದೆ. ಇದರಿಂದ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬಿತ್ತು. ಆಗ ಟಿಪ್ಪರ್ ಚಕ್ರವು ಯೊಗೀಶ್ರ ತಲೆಯ ಮೇಲೆ ಹಾದು ಹೋಗಿ ಸ್ಥಳದಲ್ಲಿಯೇ ಮೃತಪಟ್ಟರು. ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News