ಸಿಗದ ಪ್ರಾತಿನಿಧ್ಯ: ಬಿಲ್ಲವರ ಅಸಮಾಧಾನ

Update: 2018-04-21 17:24 GMT

ಮಂಗಳೂರು, ಎ. 21: ಕರಾವಳಿ ಜಿಲ್ಲೆಗಳಲ್ಲಿ ವಿಶೇಷವಾಗಿ ದ.ಕ. ಮತ್ತು ಉಡುಪಿ ಜಿಲ್ಲೆಗಳಲ್ಲಿ ವಿಧಾನಸಭಾ ಟಿಕೆಟ್ ಹಂಚಿಕೆ ವಿಚಾರದಲ್ಲಿ ಬಹು ಸಂಖ್ಯಾತರಾಗಿರುವ ಬಿಲ್ಲವರಿಗೆ ಸರಿಯಾದ ಪ್ರಾತಿನಿಧ್ಯ ನೀಡದೆ ಎಲ್ಲಾ ರಾಜಕೀಯ ಪಕ್ಷಗಳು ಕಡೆಗಣಿಸಿವೆ ಎಂದು ಬೆಂಗಳೂರು ಬಿಲ್ಲವ ಅಸೋಸಿಯೇಶನ್‌ನ ಅಧ್ಯಕ್ಷ ಎಂ. ವೇದಕುಮಾರ್ ಆರೋಪಿಸಿದ್ದಾರೆ.

ಸಂಖ್ಯಾ ಬಲದಲ್ಲಿ ಪ್ರತಿ ಜಿಲ್ಲೆಗೆ ಕನಿಷ್ಠ ಎರಡು ಉಮೇದುವಾರರಿಗೆ ಪ್ರತಿಯೊಂದು ರಾಜಕೀಯ ಪಕ್ಷ ಟಿಕೆಟ್ ನೀಡಬೇಕಾಗಿತ್ತು. ಪಕ್ಷ ಸಂಘಟನೆ, ಪ್ರತಿಭಟನೆಗೆ ಬಿಲ್ಲವರನ್ನು ಯಥೇಚ್ಚವಾಗಿ ಬಳಸಿಕೊಳ್ಳುವ ರಾಜಕೀಯ ಪಕ್ಷಗಳು ಚುನಾವಣೆಗೆ ಟಿಕೆಟ್ ನೀಡುವಲ್ಲಿ ತಾರತಮ್ಯ ಧೋರಣೆ ತಾಳಿದೆ. ಈ ಬಗ್ಗೆ ಬಿಲ್ಲವರು ರಾಜಕೀಯ ಪಕ್ಷಗಳ ಗಮನ ಸೆಳೆಯುವುದು ಅಗತ್ಯವಾಗಿದೆ. ಮುಂದೆ ಬರುವ ಸರಕಾರದಲ್ಲಿ ಬಿಲ್ಲವರಿಗೆ ಸಚಿವ ಸ್ಥಾನ ನೀಡುವಲ್ಲಿ ಸೂಕ್ತ ಪ್ರಾತಿನಿಧ್ಯ ನೀಡಬೇಕೆಂದು ಅವರು ಪ್ರಕಟನೆಯಲ್ಲಿ ಒತ್ತಾಯಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News