ಪುತ್ತೂರು: ಎ.23ರಂದು ಮೀನು, ಮಾಂಸ ಮಾರುಕಟ್ಟೆ ಬಂದ್
Update: 2018-04-21 17:55 GMT
ಪುತ್ತೂರು, ಎ. 21: ಕಥುವಾದಲ್ಲಿ ನಡೆದ ಬಾಲಕಿ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಖಂಡಿಸಿ, ಪ್ರಕರಣದ ಎಲ್ಲಾ ಆರೋಪಿಗಳನ್ನು ಪತ್ತೆ ಹಚ್ಚಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಎ.23 ದಂದು ಪುತ್ತೂರು ನಗರದ ಹಸಿಮೀನು, ಒಣಮೀನು ಮತ್ತು ಮಾಂಸದ ಮಾರುಕಟ್ಟೆಯನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುವುದು ಎಂದು ಮಾರುಕಟ್ಟೆ ಸಮಿತಿ ಅಧ್ಯಕ್ಷ ಅಬೂಬಕರ್ ಪರ್ಲಡ್ಕ ತಿಳಿಸಿದ್ದಾರೆ.
ಅತ್ಯಾಚಾರ ಮತ್ತು ಕೊಲೆ ಪ್ರಕರಣ ಅತ್ಯಂತ ಖಂಡನೀಯವಾಗಿದ್ದು, ಈ ಅಮಾನವೀಯ ಕೃತ್ಯದಿಂದ ದೇಶವೇ ತಲೆ ತಗ್ಗಿಸುವಂತಾಗಿದೆ. ಈ ಕೃತ್ಯ ನಡೆಸಿದ ದುಷ್ಕರ್ಮಿಗಳಿಗಳಿಗೆ ಕಠಿಣ ಶಿಕ್ಷೆಯನ್ನು ನೀಡುವುದರೊಂದಿಗೆ ಇಂತಹ ಘಟನೆ ದೇಶದಲ್ಲಿ ಮರುಕಳಿಸಬಾರದು ಎಂಬ ನಿಟ್ಟಿನಲ್ಲಿ ಒಂದು ದಿನ ಮಾರುಕಟ್ಟೆ ಬಂದ್ ನಡೆಸಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗುವುದು. ಗ್ರಾಹಕರು ಸಹಕರಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.