ಭಾರತದಂತಹ ದೇಶದಲ್ಲಿ ಒಂದೆರಡು ಅತ್ಯಾಚಾರ ಪ್ರಕರಣಗಳಿಗೆ ಪ್ರಚಾರ ನೀಡಬಾರದು

Update: 2018-04-22 06:41 GMT

ಹೊಸದಿಲ್ಲಿ, ಎ.22: ಭಾರತದಂತಹ ದೊಡ್ಡ ದೇಶದಲ್ಲಿ ಒಂದೆರಡು ಅತ್ಯಾಚಾರ ಪ್ರಕರಣಗಳಿಗೆ ಪ್ರಚಾರ ನೀಡಬಾರದು ಎಂದು ಕೇಂದ್ರ ಸಚಿವ ಸಂತೋಷ್ ಗಂಗ್ವಾರ್ ನೀಡಿರುವ ಹೇಳಿಕೆಯೊಂದು ವಿವಾದ ಸೃಷ್ಟಿಸಿದೆ.

“ಅತ್ಯಾಚಾರಗಳು ದುರದೃಷ್ಟಕರ. ಕೆಲವೊಮ್ಮೆ ನಮಗೆ ಅವುಗಳನ್ನು ತಡೆಯಲು ಸಾಧ್ಯವಾಗುವುದಿಲ್ಲ. ಸರಕಾರ ಎಲ್ಲಾ ಕಡೆಯೂ ಎಚ್ಚರವಾಗಿದೆ. ತನಿಖೆಗಳೂ ನಡೆಯುತ್ತಿವೆ. ಭಾರತದಂತಹ ದೊಡ್ಡ ದೇಶದಲ್ಲಿ ಅತ್ಯಾಚಾರದ ಒಂದೆರಡು ಘಟನೆಗಳನ್ನು ಪ್ರಚಾರ ಮಾಡಬಾರದು” ಎಂದವರು ಹೇಳಿದ್ದಾರೆ.

ದೇಶದಲ್ಲಿ ನಡೆಯುತ್ತಿರುವ ಅತ್ಯಾಚಾರದಂತಹ ಘಟನೆಗಳ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿರುವ ನಡುವೆ  ಕೇಂದ್ರ ಸಚಿವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಈ ಹಿಂದೆ ಉನ್ನಾವೋ ಅತ್ಯಾಚಾರ ಪ್ರಕರಣದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News