ಕಡೂರು: ಬಿಜೆಪಿ ಕಾರ್ಯಕರ್ತರ ಸಭೆಗೆ ಬಂದವರಿಗೆ ಹಣ ಹಂಚಿಕೆ ?

Update: 2018-04-22 14:45 GMT

ಚಿಕ್ಕಮಗಳೂರು,ಎ.21: ಕಡೂರು ಪಟ್ಟಣದಲ್ಲಿ ರವಿವಾರ ಹಮ್ಮಿಕೊಳ್ಳಲಾಗಿದ್ದ ಬಿಜೆಪಿ ಕಾರ್ಯಕರ್ತರ ಬಹಿರಂಗ ಸಭೆಯಲ್ಲಿ ಜನರಿಗೆ ಹಣ ಹಂಚಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. 

ಪಟ್ಟಣದಲ್ಲಿ ಬಿಜೆಪಿ ಅಭ್ಯರ್ಥಿ ಬೆಳ್ಳಿ ಪ್ರಕಾಶ್ ಪರ ಪ್ರಚಾರಕರಾಗಿ ಆಗಮಿಸಿದ್ದ ಯಡಿಯೂರಪ್ಪ ಅವರ ಕಾರ್ಯಕ್ರಮಕ್ಕೆ ಭಾರೀ ಜನರನ್ನು ಸೇರಿಸಿ ಶಕ್ತಿ ಪ್ರದರ್ಶನ ತೋರುವ ನಿಟ್ಟಿನಲ್ಲಿ ಬಿಜೆಪಿ ಮುಖಂಡರು ಹಣದ ಆಮಿಷವೊಡ್ಡಿ ಜನರನ್ನು ಕಾರ್ಯಕ್ರಮಕ್ಕೆ ಕರೆತಂದಿದ್ದಾರೆಂದು ಕೆಲ ಮೂಲಗಳು ಪತ್ರಿಕೆಗೆ ತಿಳಿಸಿವೆ.

ಈ ಸಂಬಂಧ ಕೆಲ ಸ್ಥಳೀಯ ಬಿಜೆಪಿ ಮುಖಂಡರು, ಕಾರ್ಯಕರ್ತರು ಸಭೆಗೆ ಬಂದಿದ್ದ ಜನರಿಗೆ ಹಣದ ಕಂತೆಯನ್ನು ಹಿಡಿದು ಹಂಚುತ್ತಿದ್ದಾರೆ ಎನ್ನಲಾದ ವಿಡಿಯೋ ದೃಶ್ಯಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿವೆ.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News