ಪ್ರಚಾರದ ವೇಳೆ ಇಂದಿರಾ ಕ್ಯಾಂಟೀನ್‌ನಲ್ಲಿ ಊಟ ಸವಿದ ಬಿಜೆಪಿ ಅಭ್ಯರ್ಥಿ?

Update: 2018-04-23 15:02 GMT

ಬೆಂಗಳೂರು, ಎ.23: ರಾಜ್ಯ ವಿಧಾನಸಭಾ ಚುನಾವಣೆಯ ಪ್ರಚಾರಕ್ಕಾಗಿ ತೆರಳಿದ್ದ ನಗರದ ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನೆ.ಲ.ನರೇಂದ್ರ ಬಾಬು, ಇಂದಿರಾ ಕ್ಯಾಂಟೀನ್‌ನಲ್ಲಿ ಊಟ ಸವಿದಿದ್ದಾರೆ ಎನ್ನಲಾದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಸೋಮವಾರ ಇಲ್ಲಿನ ನಂದಿನಿ ಲೇಔಟ್‌ನಲ್ಲಿರುವ ಇಂದಿರಾ ಕ್ಯಾಂಟೀನಲ್ಲಿ ನರೇಂದ್ರ ಬಾಬು ಹಾಗೂ ಅವರ ಬೆಂಬಲಿಗರು ಊಟ ಮಾಡಿದ್ದಾರೆ ಎನ್ನಲಾದ ಫೋಟೋ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಕಾಣಿಸಿಕೊಂಡಿದ್ದು, ಪರ-ವಿರೋಧದ ಮಾತುಗಳು ಕೇಳಿಬರುತ್ತಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News