ಉಡುಪಿ: ರಾಜೇಶ್ವರಿ ಶೆಟ್ಟಿಗೆ ಸುಪ್ರೀಂ ಕೋರ್ಟ್ ಜಾಮೀನು

Update: 2018-04-23 17:11 GMT

ಉಡುಪಿ, ಎ. 23: ಉದ್ಯಮಿ ಕೆ. ಭಾಸ್ಕರ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣ ಪ್ರಮುಖ ಆರೋಪಿ ರಾಜೇಶ್ವರಿ ಶೆಟ್ಟಿ ಅವರಿಗೆ ಜಾಮೀನು ಮಂಜೂರಾಗಿದ್ದು, ಪ್ರಮುಖ 36 ಸಾಕ್ಷಿಗಳನ್ನು ವಿಚಾರಣೆ ನಡೆಸಿ ಬಿಡುಗಡೆಗೊಳಿಸುವಂತೆ ಉಡುಪಿ ಜಿಲ್ಲಾ ಸತ್ರ ಮತ್ತು ಪ್ರಧಾನ ನ್ಯಾಯಾಲಯಕ್ಕೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ.

ಎಸ್.ಎ. ಬೋಬ್ಡೆ ಮತ್ತು ಎಲ್ ನಾಗೇಶ್ವರ ರಾವ್ ವಿಭಾಗೀಯ ಪೀಠ ಸೋಮವಾರ ತೀರ್ಪು ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿ 164 ಸಾಕ್ಷಿಗಳ ಪೈಕಿ 36 ‌ಮಂದಿಯನ್ನು ಶೀಘ್ರವೇ ವಿಚಾರಣೆ ನಡೆಸಲು ಆದೇಶ ನೀಡಿದೆ ಎಂದು ತಿಳಿದು ಬಂದಿದೆ.

ನ್ಯಾಯವಾದಿಗಳಾದ ಅರುಣ್ ಶ್ಯಾಮ್ ಹಾಗೂ ಶೈಲೇಶ್ ಮಡಿಯಾಳ ಆರೋಪಿ ಪರ ವಕಾಲತ್ತು ವಹಿಸಿದ್ದು, ಹಿರಿಯ ನ್ಯಾಯವಾದಿ ಬಸವ ಪ್ರಭು ಪಾಟೀಲ್ ವಾದ ಮಂಡಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News