ಕಾಪು: ಬಿಜೆಪಿ ಅಭ್ಯರ್ಥಿಯಾಗಿ ಲಾಲಾಜಿ ಮೆಂಡನ್ ನಾಮಪತ್ರ ಸಲ್ಲಿಕೆ

Update: 2018-04-23 17:54 GMT

ಉಡುಪಿ, ಎ.23: ಕಾಪು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಶಾಸಕ ಲಾಲಾಜಿ ಆರ್.ಮೆಂಡನ್ ಇಂದು ನಾಮಪತ್ರ ಸಲ್ಲಿಸಿದರು.

ಕಾಪು ಬಿಜೆಪಿ ಕಚೇರಿಯಿಂದ ಹೊರಟ ಲಾಲಾಜಿ ಆರ್.ಮೆಂಡನ್, ಕಾಪು ಜರ್ನಾದನ ದೇವಸ್ಥಾನ, ಮಾರಿಗುಡಿ, ವೆಂಕರಮಣ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಕಾರ್ಯಕರ್ತರ ಜೊತೆಗೂಡಿ ಉಡುಪಿಯಲ್ಲಿರುವ ಚುನಾವಣಾ ಕಚೇರಿ ಆಗಮಿಸಿ ನಾಮಪತ್ರವನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಪತ್ನಿ ಇಂದಿರಾ, ಕಾಪು ಕ್ಷೇತ್ರ ಅಧ್ಯಕ್ಷ ಪ್ರಕಾಶ್ ಶೆಟ್ಟಿ, ಕಟಪಾಡಿ ಶಂಕರ ಪೂಜಾರಿ, ಶಶಾಂಕ್ ಶಿವತ್ತಾಯ, ಗಂಗಾಧರ ಸುವರ್ಣ ಮೊದಲಾದವರು ಉಪಸ್ಥಿತರಿದ್ದರು. ಬಳಿಕ ಮಾತನಾಡಿದ ಅವರು, ಕಾಪುವನ್ನು ಮಾದರಿ ಕ್ಷೇತ್ರವಾಗಿ ಮಾಡುವ ಉದ್ದೇಶದದಿಂದ ದೇವರ ಆಶೀರ್ವಾದ, ಕಾರ್ಯಕರ್ತರ ಸಹಕಾರದೊಂದಿಗೆ ನಾಮಪತ್ರ ಸಲ್ಲಿಸಿದ್ದೇನೆ. ಕಾಪು ಕ್ಷೇತ್ರವನ್ನು ಬಿಜೆಪಿ ಕ್ಷೇತ್ರವನ್ನಾಗಿ ಮಾಡುವ ದೃಢ ಸಂಕಲ್ಪವನ್ನು ಹೊಂದಿದ್ದೇವೆ. ಕಳೆದ ಬಾರಿ ನಿಕಟ ಸ್ಪರ್ಧೆ ನೀಡಿ ಸೋತಿ ದ್ದೇನೆ. ಈ ಬಾರಿ ಕಾರ್ಯಕರ್ತರ ಪರಿಶ್ರಮ, ಕಾಂಗ್ರೆಸ್ ವಿರೋಧಿ ಅಲೆ ಯಿಂದ ನಮ್ಮ ಗೆಲುವು ಖಚಿತ. ಅದಕ್ಕಾಗಿ ನಾವೆಲ್ಲರು ತಂಡವಾಗಿ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News