ಮಠಕ್ಕೆ ಭದ್ರತೆ: ಪರ್ಯಾಯ ಸ್ವಾಮೀಜಿಯಿಂದ ಕೇಂದ್ರ ಗೃಹ ಸಚಿವರಿಗೆ ಮನವಿ

Update: 2018-04-23 18:02 GMT

ಉಡುಪಿ, ಎ.23: ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಇಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ, ಶ್ರೀಕೃಷ್ಣನ ದರ್ಶನ ಪಡೆದರು. ಪರ್ಯಾಯ ಪಲಿಮಾರು ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಸನ್ಮಾನಿಸಿ ಅನುಗ್ರಹ ಮಂತ್ರಾಕ್ಷತೆ ನೀಡಿದರು.

ಉಡುಪಿ ಶ್ರೀ ಕೃಷ್ಣ ಮಠ ಭಯೋತ್ಪಾದಕರ ಪಟ್ಟಿಯಲ್ಲಿರುವುದರಿಂದ ಇಲ್ಲಿಗೆ ಶಾಶ್ವತ ಭದ್ರತೆ ಯನ್ನು ಒದಗಿಸಬೇಕು ಎಂದು ಸ್ವಾಮೀಜಿ ಸಚಿವರಲ್ಲಿ ಮನವಿ ಮಾಡಿದರು. ಸಚಿವ ರಾಜನಾಥ್ ಸಿಂಗ್ ಸ್ವಾಮೀಜಿಯ ಮನವಿಗೆ ಸ್ಪಂದಿಸಿದರು.

ಈ ಸಂದರ್ಭದಲ್ಲಿ ಸಂಸದೆ ಶೋಭಾ ಕರಂದ್ಲಾಜೆ, ಬಿಜೆಪಿ ಅಭ್ಯರ್ಥಿ ರಘು ಪತಿ ಭಟ್, ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ್ ಹೆಗ್ಡೆ, ಮುಖಂಡ ಉದಯ ಕುಮಾರ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News