ಇಂದು ಮಧ್ಯಾಹ್ನ ಬಾದಾಮಿಯಲ್ಲಿ ಸಿದ್ದರಾಮಯ್ಯ-ಶ್ರೀರಾಮುಲು ನಾಮಪತ್ರ

Update: 2018-04-24 04:48 GMT

ಬೆಂಗಳೂರು, ಎ.24: ಕುತೂಹಲ ಕೆರಳಿಸಿದ ಬಾದಾಮಿ ವಿಧಾನ ಸಭಾ ಕ್ಷೇತ್ರಕ್ಕೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಮತ್ತು ಸಂಸದ ಶ್ರೀರಾಮುಲು ಇಂದು ಮಧ್ಯಾಹ್ನ ನಾಮಪತ್ರ ಸಲ್ಲಿಸಲಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿದ್ದರಾಮಯ್ಯ  ಬಾದಾಮಿಯಲ್ಲಿ ಸ್ಪರ್ಧಿಸುವ ನಿರ್ಧಾರ ಪ್ರಕಟಿಸುತ್ತಿದ್ದಂತೆ, ಬಿಜೆಪಿ ಸಂಸದ ಶ್ರೀರಾಮುಲು ಅವರನ್ನು ಕಣಕ್ಕಿಳಿಸಲು ತೀರ್ಮಾನಿಸಿದೆ. ಇದರೊಂದಿಗೆ ಸಿದ್ದರಾಮಯ್ಯ ಮತ್ತು ಶ್ರೀರಾಮುಲು ಎರಡು ಕ್ಷೇತ್ರಗಳಿಂದ ಅದೃಷ್ಠ ಪರೀಕ್ಷೆಗೆ ಇಳಿದಿದ್ದಾರೆ.

ಸಿದ್ದರಾಮಯ್ಯ ಚಾಮುಂಡೇಶ್ವರಿಯಲ್ಲಿ ಮತ್ತು ಶ್ರೀರಾಮುಲು ಮೊಳಕಾಲ್ಮುರು ಕ್ಷೇತ್ರದಿಂದ  ಆಯ್ಕೆ ಬಯಸಿ ಈಗಾಗಲೇ ನಾಮಪತ್ರ ಸಲ್ಲಿಸಿದ್ದಾರೆ.

ಸಿದ್ದರಾಮಯ್ಯ ಮತ್ತು ಶ್ರೀರಾಮುಲು ಇಂದು ಮಧ್ಯಾಹ್ನ 12ರಿಂದ 12:30ರ ಒಳಗಾಗಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ತಿಳಿದು ಬಂದಿದೆ. ಇವರ ಸ್ಪರ್ಧೆಯಿಂದ ಬಾದಾಮಿ ಕ್ಷೇತ್ರ ಎಲ್ಲರ  ಗಮನ ಸೆಳೆದಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News