ಮಂಡ್ಯ ಕ್ಷೇತ್ರಕ್ಕೆ ಗಣಿಗ ರವಿ ಕಾಂಗ್ರೆಸ್ ಅಭ್ಯರ್ಥಿ ?

Update: 2018-04-24 07:03 GMT

ಮಂಡ್ಯ, ಎ.24: ಮಂಡ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಶಾಸಕ ಅಂಬರೀಶ್ ಕಣಕ್ಕಿಳಿಯಲು ಹಿಂದೇಟು ಹಾಕಿ ಇರುವ ಹಿನ್ನೆಲೆಯಲ್ಲಿ ಗಣಿಗ ರವಿ ಅವರನ್ನು ಕಾಂಗ್ರೆಸ್ ತನ್ನ ಅಭ್ಯರ್ಥಿಯಾಗಿ ಆಯ್ಕೆ ಮಾಡಿದೆ.

ಅಂಬರೀಶ್ ಸ್ಪರ್ಧಿಸುವುದಿಲ್ಲ ಎಂಬ ನಿಲುವಿಗೆ ಅಂಟಿಕೊಂಡ ಹಿನ್ನೆಲೆಯಲ್ಲಿ ಮಂಡ್ಯ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಗಾಗಿ ಹಲವು ನಾಯಕರು ಪೈಪೋಟಿ ನಡೆಸಿದ್ದರು. ಇದೀಗ  ಮಂಡ್ಯದ ಪ್ರಭಾವಿ ಯುವ ನಾಯಕ ಗಣಿಗ ರವಿ ಹೈಕಮಾಂಡ್ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಅವರಿಗೆ ಮಂಡ್ಯದ ಕಾಂಗ್ರೆಸ್ ಟಿಕೆಟ್ ಫೈನಲ್ ಆಗಿದೆ  ಎಂದು ತಿಳಿದು ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News