ಶಿವಮೊಗ್ಗ: ಮಹಾನಗರ ಪಾಲಿಕೆ ಆಯುಕ್ತರ ವರ್ಗಾವಣೆ
Update: 2018-04-24 11:32 GMT
ಶಿವಮೊಗ್ಗ, ಎ. 24: ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತರಾಗಿ ಕಾರ್ಯನಿರ್ವಹಣೆ ಮಾಡುತ್ತಿದ್ದ ಮುಲ್ಲೈ ಮುಹಿಲನ್ರನ್ನು ರಾಮನಗರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಐಎಸ್ ಅಧಿಕಾರಿಯಾದ ಮುಲ್ಲೈ ಮುಹಿಲನ್ರನ್ನು ಕಳೆದ ಕೆಲ ತಿಂಗಳುಗಳ ಹಿಂದೆ ಮಹಾನಗರ ಪಾಲಿಕೆ ಆಯುಕ್ತರಾಗಿ ಹಾಗೂ ಶಿವಮೊಗ್ಗ ಸ್ಮಾರ್ಟ್ ಸಿಟಿ ಮುಖ್ಯಸ್ಥರನ್ನಾಗಿ ನಿಯೋಜಿಸಲಾಗಿತ್ತು. ನಗರಾಭಿವೃದ್ದಿ ಇಲಾಖೆಯಿಂದ ಅವರ ಸೇವೆಯನ್ನು ಹಿಂಪಡೆದು, ಪಂಚಾಯತ್ ರಾಜ್ ಇಲಾಖೆಗೆ ಸರ್ಕಾರ ವರ್ಗಾಯಿಸಿದೆ.