ಲಾರಿ ಪಲ್ಟಿ: ನಿರ್ವಾಹಕ ಮೃತ್ಯು
Update: 2018-04-24 13:43 GMT
ಅಜೆಕಾರು, ಎ.24: ಲಾರಿಯೊಂದು ಮಗುಚಿ ಬಿದ್ದ ಪರಿಣಾಮ ನಿರ್ವಾಹಕರೊಬ್ಬರು ಮೃತಪಟ್ಟ ಘಟನೆ ಮರ್ಣೆ ಗ್ರಾಮದ ಎಣ್ಣೆಹೊಳೆ ರಾಧಾ ನಾಯಕ್ ಹೈಸ್ಕೂಲ್ ಬಳಿ ಸೋಮವಾರ ಅಪರಾಹ್ನ ವೇಳೆ ನಡೆದಿದೆ.
ಮೃತರನ್ನು ಪ್ರಕಾಶ್ ಶೆಟ್ಟಿ(35) ಎಂದು ಗುರುತಿಸಲಾಗಿದೆ. ಎಣ್ಣೆಹೊಳೆಯಿಂದ ಕೈಕಂಬ ಕೂಡು ರಸ್ತೆ ಕಡೆಗೆ ಹೋಗುತ್ತಿದ್ದ ಲಾರಿಯು ಚಾಲಕನ ನಿಯಂತ್ರಣ ತಪ್ಪಿರಸ್ತೆಯಲ್ಲಿ ಮಗುಚಿ ಬಿತ್ತೆನ್ನಲಾಗಿದೆ. ಇದರ ಪರಿಣಾಮ ಲಾರಿಯಲ್ಲಿದ್ದ ನಿರ್ವಾಹಕ ಪ್ರಕಾಶ ಲಾರಿಯಡಿಗೆ ಸಿಲುಕಿ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟರು. ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.