ವಿಜಯೇಂದ್ರಗೆ ತಪ್ಪಿದ ಟಿಕೆಟ್: ಕಾಂಗ್ರೆಸ್ ಸೇರ್ಪಡೆಗೊಂಡ ಬಿಜೆಪಿ ಕಾರ್ಯಕರ್ತರು
Update: 2018-04-24 13:57 GMT
ಮೈಸೂರು,ಎ.24: ವರುಣಾ ಕ್ಷೇತ್ರದಿಂದ ಬಿ.ವೈ.ವಿಜಯೇಂದ್ರಗೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಕೆಲ ಬಿಜೆಪಿ ಕಾರ್ಯಕರ್ತರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡರು.
ನಗರದ ಖಾಸಗಿ ಹೋಟೆಲ್ ನಲ್ಲಿ ಮಂಗಳವಾರ ಡಾ.ಯತೀಂದ್ರ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ವರುಣಾ ಕ್ಷೇತ್ರದ ವೀರಶೈವ ಲಿಂಗಾಯತ ಮುಖಂಡರು ಬಿಜೆಪಿ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಗೊಂಡರು.
ವರುಣಾ ಕ್ಷೇತ್ರದಲ್ಲಿ ಬಿ.ವೈ.ವಿಜಯೇಂದ್ರಗೆ ಟಿಕೆಟ್ ಕೈ ತಪ್ಪಿದಾಗಿನಿಂದ ಬಿಜೆಪಿ ಕಾರ್ಯಕರ್ತರು ಆಕ್ರೋಶಗೊಂಡು ಪ್ರತಿಭಟನೆಗಳನ್ನು ಮಾಡಿದ್ದರು. ಇಂದು ನಗರ ಬಿಜೆಪಿ ಕಚೇರಿ ಮೇಲೆ ಕಲ್ಲು ತೂರಾಟವನ್ನೂ ನಡೆಸಿದ್ದರು.