ವರುಣಾ ಬಿಜೆಪಿ ಅಭ್ಯರ್ಥಿಯಾಗಿ ತೋಟದಪ್ಪ ಟಿ.ಬಸವರಾಜು ನಾಮಪತ್ರ ಸಲ್ಲಿಕೆ

Update: 2018-04-24 13:59 GMT

ಮೈಸೂರು,ಎ.24: ವರುಣಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ತೋಟದಪ್ಪ ಟಿ.ಬಸವರಾಜು ನಾಮಪತ್ರ ಸಲ್ಲಿಸಿದರು.

ಗಲಾಟೆ ಗದ್ದಲಗಳ ನಡುವೆಯೇ ಬಿಜೆಪಿ ಪಕ್ಷದ ವರಿಷ್ಠರ ಸೂಚನೆ ಮೇರೆಗೆ ಮಂಗಳವಾರ ನಂಜನಗೂಡು ತಾಲೂಕು ಕಚೇರಿಗೆ ಆಗಮಿಸಿದ ಅವರು, ಚುನಾವಣಾಧಿಕಾರಿಗಳಿಗೆ ತಮ್ಮ ಉಮೇದುವಾರಿಕೆ ಸಲ್ಲಿಸಿದರು.

ವಿಜಯೇಂದ್ರ ಅವರಿಗೆ ಟಿಕೆಟ್ ಕೈ ತಪ್ಪಿದ ಹಿನ್ನಲೆಯಲ್ಲಿ ಬಿಜೆಪಿ ಕಾರ್ಯಕರ್ತರು ತಟಸ್ಥರಾಗಿದ್ದು, ತೋಟದಪ್ಪ ಟಿ.ಬಸವರಾಜು ನಾಮಪತ್ರ ಸಲ್ಲಿಕೆ ವೇಳೆ ಬೆರಳೆಣಿಕೆಯಷ್ಟು ಮಂದಿ ಬಿಟ್ಟರೆ ಬೇರಾರು ಭಾಗವಹಿಸಿರಲಿಲ್ಲ ಎಂದು ತಿಳಿದು ಬಂದಿದೆ.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News