ವಿಜಯೇಂದ್ರರನ್ನು ಕಣಕ್ಕಿಳಿಸದಿರುವುದು ಚುನಾವಣಾ ಕಾರ್ಯತಂತ್ರ: ಶೋಭಾ ಕರಂದ್ಲಾಜೆ

Update: 2018-04-24 15:34 GMT

ಬೆಂಗಳೂರು, ಎ. 24: ವರುಣಾ ಕ್ಷೇತ್ರದಲ್ಲಿ ವಿಜಯೇಂದ್ರ ಅವರನ್ನು ಕಣಕ್ಕೆ ಇಳಿಸದಿರುವುದು ಪಕ್ಷದ ಚುನಾವಣಾ ಕಾರ್ಯತಂತ್ರದ ಒಂದು ಭಾಗವಾಗಿದೆ. ವಿಜಯೇಂದ್ರ ಮತ್ತು ರಾಘವೇಂದ್ರ ಮೈಸೂರು ಭಾಗದಲ್ಲಿ ಪ್ರಚಾರ ನಡೆಸಲಿದ್ದಾರೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

ಮಂಗಳವಾರ ಬಿಜೆಪಿ ಚುನಾವಣಾ ಮಾಧ್ಯಮ ಕೇಂದ್ರದಲ್ಲಿ ಪಕ್ಷದ ಪ್ರಚಾರಕ್ಕೆ ಹಾಡುಗಳು ಮತ್ತು ರೇಡಿಯೋ ಜಿಂಗಲ್ಸ್ ಬಿಡುಗಡೆ ಮಾಡಿದ ಬಳಿಕ ಮಾತನಾಡಿದ ಅವರು, ಸಮೀಕ್ಷೆಗಳ ವರದಿಗಿಂತಲೂ ಬಿಜೆಪಿ ಹೆಚ್ಚಿನ ಸ್ಥಾನಗಳನ್ನು ಗಳಿಸಲಿದ್ದು, ಯಡಿಯೂರಪ್ಪ ಅಧಿಕಾರದ ಗದ್ದುಗೆ ಏರಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮಹಿಳೆಯರ ಸುರಕ್ಷತೆ ಮತ್ತು ಸಬಲೀಕರಣಕ್ಕೆ ವಿಶೇಷ ಒತ್ತು ನೀಡುತ್ತಿರುವ ಕೇಂದ್ರ ಸರಕಾರ 12 ವರ್ಷದೊಳಗಿನ ಮಕ್ಕಳ ಮೇಲೆ ಅತ್ಯಾಚಾರ ನಡೆಸುವವರಿಗೆ ಮರಣದಂಡನೆ ಶಿಕ್ಷೆ ವಿಧಿಸುವ ಸುಗ್ರೀವಾಜ್ಞೆ ಜಾರಿಗೆ ತರಲು ಮೋದಿ ಸರಕಾರ ಐತಿಹಾಸಿಕ ನಿರ್ಧಾರ ಕೈಗೊಂಡಿದೆ ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News