ಡಾ.ವೀರೇಂದ್ರ ಹೆಗ್ಗಡೆಗೆ ಸುರಾನ ವಿದ್ಯಾ ಸಂಸ್ಥೆಯಿಂದ ಸಾಧಕ ಪ್ರಶಸ್ತಿ
Update: 2018-04-24 17:48 GMT
ಬೆಳ್ತಂಗಡಿ, ಎ.24: ಬೆಂಗಳೂರಿನ ಸುರಾನ ವಿದ್ಯಾ ಸಂಸ್ಥೆಗಳ ವತಿಯಿಂದ ನೀಡುವ 2017ರ ಸಾಲಿನ ಜೀವಮಾನ ಶ್ರೇಷ್ಠ ಸಾಧಕ ಪ್ರಶಸ್ತಿಯನ್ನು ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಮಂಗಳವಾರ ಪ್ರದಾನ ಮಾಡಿ ಗೌರವಿಸಲಾಯಿತು.
ಸುರಾನ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯೆ ಡಾ.ಅರ್ಚನಾ ಸುರಾನ ಮತ್ತು ವಿವಿಧ ಸಂಸ್ಥೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.