×
Ad

ಸಗ್ರಿ ರಾಘವೇಂದ್ರ ಉಪಾಧ್ಯರಿಗೆ ‘ಪರವಿದ್ಯಾಮಾನ್ಯ’ ಪ್ರಶಸ್ತಿ

Update: 2018-04-25 21:55 IST

 ಉಡುಪಿ, ಎ.25: ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಶ್ರೀವಿದ್ಯಾಮಾನ್ಯ ತೀರ್ಥ ಶ್ರೀಪಾದರ 18ನೇ ಆರಾಧನಾ ಮಹೋತ್ಸವ ಪ್ರಯುಕ್ತ ಪರ್ಯಾಯ ಪಲಿಮಾರು ಮಠಾಧೀಶ ಶ್ರೀವಿದ್ಯಾಧೀಶ ತೀರ್ಥರಿಂದ ಇಂದು ಶ್ರೀಮನ್ನ್ಯಾಸುಧಾ ಮಂಗಲೋತ್ಸವ ಪ್ರವಚನ ನಡೆಯಿತು.

ಈ ಸಂದರ್ಭದಲ್ಲಿ ಪೇಜಾವರ ಹಿರಿಯ ಮಠಾಧೀಶ ಶ್ರೀವಿಶ್ವೇಶ ತೀರ್ಥರು, ಪೇಜಾವರ ಕಿರಿಯ ಮಠಾಧೀಶ ಶ್ರೀವಿಶ್ವಪ್ರಸನ್ನ ತೀರ್ಥರು, ವ್ಯಾಸರಾಜ ಮಠಾಧೀಶ ಶ್ರೀವಿದ್ಯಾಶ್ರೀಶ ತೀರ್ಥರು, ಕಾಣಿಯೂರು ಮಠಾಧೀಶ ಶ್ರೀವಿದ್ಯಾವಲ್ಲಭ ತೀರ್ಥರು , ಸೋದೆ ಮಠಾಧೀಶ ಶ್ರೀವಿಶ್ವವಲ್ಲಭ ತೀರ್ಥರು, ಭೀಮನ ಕಟ್ಟೆ ಮಠಾಧೀಶ ಶ್ರೀರಘುವರೇಂದ್ರ ತೀರ್ಥರು, ಅದಮಾರು ಕಿರಿಯ ಮಠಾಧೀಶ ಶ್ರೀ ಈಶಪ್ರಿಯ ತೀರ್ಥರು, ಬನ್ನಂಜೆ ಶ್ರೀರಾಘವೇಂದ್ರ ತೀರ್ಥರು, ಪ್ರಯಾಗ ಮಠಾಧೀಶ ಶ್ರೀಸತ್ಯಾತ್ಮ ತೀರ್ಥರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಪರ್ಯಾಯ ಪಲಿಮಾರು ಮಠಾಧೀಶ ಶ್ರೀ ವಿದ್ಯಾಧೀಶ ತೀರ್ಥರು ಎಲ್ಲಾ ಮಠಾಧೀಶರ ಉಪಸ್ಥಿತಿಯಲ್ಲಿ ಪ್ರಸಿದ್ಧ ವಿದ್ವಾಂಸರಾದ ಸಗ್ರಿ ರಾಘವೇಂದ್ರ ಉಪಾಧ್ಯಾಯರಿಗೆ ಶ್ರೀವಿದ್ಯಾಮಾನ್ಯ ತೀರ್ಥರ ಸ್ಮರಣಾರ್ಥ ‘ಶ್ರೀಪರವಿದ್ಯಾಮಾನ್ಯ’ ಪ್ರಶಸ್ತಿ ನೀಡಿ ಗೌರವಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News