​ಎ.29ರಂದು ಉಪರಾಷ್ಟ್ರಪತಿ ಮಂಗಳೂರಿಗೆ

Update: 2018-04-25 17:10 GMT

 ಮಂಗಳೂರು, ಎ.25: ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಎ.29ರಂದು ಮಂಗಳೂರಿಗೆ ಆಗಮಿಸಲಿದ್ದಾರೆ.

ಅಂದು ಬೆಳಗ್ಗೆ 9:40ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಉಪರಾಷ್ಟ್ರಪತಿ, ಬಳಿಕ ಹೆಲಿಕಾಪ್ಟರ್‌ನಲ್ಲಿ ಕಾಸರಗೋಡಿಗೆ ತೆರಳಲಿದ್ದಾರೆ.

ಮಧ್ಯಾಹ್ನ 1 ಗಂಟೆಗೆ ಮಂಗಳೂರಿಗೆ ಹಿಂದಿರುಗುವ ಅವರು ಅಂದು ರಾತ್ರಿ ನಗರದಲ್ಲಿ ವಾಸ್ತವ್ಯ ಹೂಡುವರು ಎ.30ರಂದು ಮಧ್ಯಾಹ್ನ 12:20ಕ್ಕೆ ವಿಶೇಷ ವಿಮಾನದ ಮೂಲಕ ಕೊಚ್ಚಿನ್‌ಗೆ ತೆರಳಲಿದ್ದಾರೆ.

ಉಪರಾಷ್ಟ್ರಪತಿಯವರ ಪ್ರವಾಸ ನಿಮಿತ್ತ ಬುಧವಾರ ಜಿಲ್ಲಾಧಿಕಾರಿ ಡಾ. ಸಸಿಕಾಂತ್ ಸೆಂಥಿಲ್ ಅಧ್ಯಕ್ಷತೆಯಲ್ಲಿ ಉನ್ನತ ಅಧಿಕಾರಿಗಳ ಪೂರ್ವಭಾವಿ ಸಭೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News