ನಮ್ಮ ಸರಕಾರದ ವಿರುದ್ಧ ಆಡಳಿತ ವಿರೋಧಿ ಅಲೆ ಇಲ್ಲ: ಸಿದ್ದರಾಮಯ್ಯ

Update: 2018-04-27 11:52 GMT

ಮಂಗಳೂರು, ಎ.27: ನಮ್ಮ ಸರಕಾರದ ವಿರುದ್ಧ ಆಡಳಿತ ವಿರೋಧಿ ಅಲೆ ಇಲ್ಲ.ಇದು ಸರಕಾರದ ದೊಡ್ಡ ಸಾಧನೆಯಾಗಿದೆ  ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. 

 ಟಿಎಂಎ ಪೈ ಹಾಲ್ ನಲ್ಲಿ ನಡೆದ ಪಕ್ಷದ ಚುನಾವಣಾ ಪ್ರಣಾಳಿಕೆ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ. ಕಳೆದ ಪ್ರಣಾಳಿಕೆಯಲ್ಲಿ  ಜನತೆಗೆ ನೀಡಿದ್ದ ಭರವಸೆಗಳ ಪೈಕಿ ಶೇ 90ರಷ್ಟನ್ನು ಈಡೇರಿಸಿದ್ದೇವೆ ಎನ್ನುವುದಕ್ಕೆ ಸಂತಸವಾಗುತ್ತದೆ ಎಂದರು.

ಎಪಿಎಂಸಿಯಲ್ಲಿ ಆನ್ ಲೈನ್ ಮಾರುಕಟ್ಟೆ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಇದು ದೇಶಕ್ಕೆ ಮಾದರಿಯಾಗಿದೆ. ಕೇಂದ್ರ ಸರಕಾರ ಇದರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದೆ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News