×
Ad

ಆನೇಕಲ್: ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

Update: 2018-04-27 20:04 IST

ಆನೇಕಲ್, ಎ.27: ಕೆರೆಗೆ ಸ್ನಾನಕ್ಕಿಳಿದ ಯುವಕನೋರ್ವ ಮುಳುಗಿ ಮೃತಪಟ್ಟ ಘಟನೆ ಆನೇಕಲ್ಗುಡ್ನಹಳ್ಳಿ ಎಂಬಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ.

ಮೃತರನ್ನು ಇಲ್ಲಿನ ಆಶ್ರಯ ಯೋಜನೆ ದಿನ್ನೆ ವಾಸಿ ಹರೀಶ್ ಎಂದು ಗುರುತಿಸಲಾಗಿದೆ. ಇವರು ಇಂದು ಮಧ್ಯಾಹ್ನ ಎಂಟು ಮಂದಿ ಗೆಳೆಯರೊಂದಿಗೆ ಗುಡ್ನಹಳ್ಳಿ ಕೆರೆಗೆ ಸ್ನಾನಕ್ಕೆ ತೆರಳಿದ್ದರು. ಈ ವೇಳೆ ಆಕಸ್ಮಿಕವಾಗಿ ಮುಳುಗಿ ಮೃತಪಟ್ಟರೆನ್ನಲಾಗಿದೆ.
ಈ ಬಗ್ಗೆ ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News