ದೌರ್ಜನ್ಯ ತಡೆ ಕಾಯ್ದೆ: ಸುಪ್ರೀಂ ಕೋರ್ಟ್ ತೀರ್ಪು ಬಗ್ಗೆ ಎ.28 ರಂದು ವಿಚಾರಗೋಷ್ಠಿ

Update: 2018-04-27 16:25 GMT

ಬೆಂಗಳೂರು. ಎ. 27: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ ವಿರುದ್ಧ ಸುಪ್ರೀಂ ಕೋರ್ಟ್ ತೀರ್ಪಿನ ಬಗ್ಗೆ ನಾಳೆ(ಎ.28) ಸಂಜೆ 5:30ಕ್ಕೆ ಇಲ್ಲಿನ ಸರಕಾರಿ ಕಲಾ ಕಾಲೇಜಿನ ಬಾಪೂಜಿ ಸಭಾಂಗಣದಲ್ಲಿ ವಿಚಾರ ಗೋಷ್ಠಿಯನ್ನು ಸರಕಾರಿ ಪ್ರಥಮ ದರ್ಜೆ ಕಾಲೇಜು ಎಸ್ಸಿ-ಎಸ್ಟಿ ಅಧ್ಯಾಪಕರ ಸಂಘದ ವತಿಯಿಂದ ಏರ್ಪಡಿಸಲಾಗಿದೆ.

ಹೈಕೋರ್ಟಿನ ವಕೀಲ ಬಿ.ಟಿ.ವೆಂಕಟೇಶ್ ವಿಷಯ ಮಂಡನೆ ಮಾಡಲಿದ್ದು, ಲೆಕ್ಕ ಪರಿಶೋಧನಾ ಇಲಾಖೆ ಅಪರ ನಿರ್ದೇಶಕ ಎನ್.ಬಿ.ಶಿವರುದ್ರಯ್ಯ ಹಾಗೂ ರಾಜ್ಯ ಸರಕಾರಿ ಎಸ್ಸಿ-ಎಸ್ಟಿ ನೌಕರರ ಸಮನ್ವಯ ಸಮಿತಿ ಅಧ್ಯಕ್ಷ ಡಿ.ಶಿವಶಂಕರ್, ಸಂಘದ ಅಧ್ಯಕ್ಷ ಡಾ.ಕೆ.ಕೃಷ್ಣಪ್ಪ ಪಾಲ್ಗೊಳ್ಳಲಿದ್ದಾರೆಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News