ಮಂಗಳೂರಿಗೆ ಆಗಮಿಸಿದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು

Update: 2018-04-29 07:00 GMT

ಮಂಗಳೂರು, ಎ.29: ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಇಂದು ಬೆಳಗ್ಗೆ ಮಂಗಳೂರಿಗೆ ಆಗಮಿಸಿದ್ದಾರೆ.

ಕಾಸರಗೋಡಿನ ಪೆರಿಯಾದಲ್ಲಿರುವ ಕೇಂದ್ರೀಯ ವಿಶ್ವವಿದ್ಯಾನಿಲಯದ ನೂತನ ಕ್ಯಾಂಪಸ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವುದಕ್ಕಾಗಿ ಅವರು ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದರು.

ವಿಶೇಷ ವಿಮಾನದಲ್ಲಿ ಆಗಮಿಸಿದ ಉಪರಾಷ್ಟ್ರಪತಿಯವರನ್ನು ದ.ಕ. ಜಿಲ್ಲಾಧಿಕಾರಿ ಸಸಿಕಾಂಕ್ ಸೆಂಥಿಲ್ ಸ್ವಾಗತಿಸಿದರು. ಈ ಸಂದರ್ಭ ಮಂಗಳೂರು ನಗರ ಪೊಲೀಸ್ ಆಯುಕ್ತ ವಿಪುಲ್ ಕುಮಾರ್, ಮಂಗಳೂರು ಸಹಾಯಕ ಆಯುಕ್ತ ಮಹೇಶ್ ಕರ್ಝಗಿ ಉಪಸ್ಥಿತರಿದ್ದರು.

ಉಪರಾಷ್ಟ್ರಪತಿಯವರು ಮಂಗಳೂರು ವಿಮಾನ ನಿಲ್ದಾಣದಿಂದ ನೇರವಾಗಿ ಹೆಲಿಕಾಪ್ಟರ್ ಮೂಲಕ ಕಾಸರಗೋಡಿನ ಪೆರಿಯಾಕ್ಕೆ ತೆರಳಿದರು.

ಕಾರ್ಯಕ್ರಮ ಮುಗಿಸಿ ಮಧ್ಯಾಹ್ನ 1 ಗಂಟೆಗೆ ಮತ್ತೆ ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೆಲಿಕಾಪ್ಟರ್ ಮೂಲಕ ಆಗಮಿಸುವ ಉಪ ರಾಷ್ಟ್ರತಿ ವೆಂಕಯ್ಯ ನಾಯ್ಡು ಅಲ್ಲಿಂದ 1:10ಕ್ಕೆ ಕೊಚ್ಚಿನ್‌ಗೆ ತೆರಳುವರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News