ತುಮಕೂರು: ಬಿಜೆಪಿ ಅಭ್ಯರ್ಥಿ ಪರ ನಟಿ ಶೃತಿ ರೋಡ್ ಶೋ

Update: 2018-05-02 16:52 GMT

ತುಮಕೂರು,ಮೇ.02: ಮೇ.12 ರಂದು ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಾರಿ ಬಹುಮತದೊಂದಿಗೆ ಅಧಿಕಾರ ಹಿಡಿಯಲಿದ್ದು, ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಸರಕಾರ ರಚಿಸಲಿದ್ದಾರೆ ಎಂದು ಬಿಜೆಪಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಹಾಗೂ ಚಿತ್ರನಟಿ ಶ್ರೀಮತಿ ಶೃತಿ ತಿಳಿಸಿದ್ದಾರೆ.

ತುಮಕೂರು ನಗರದ ಕ್ಯಾತ್ಸಂದ್ರದಲ್ಲಿ ಬಿಜೆಪಿ ಅಭ್ಯರ್ಥಿ ಜೋತಿ ಗಣೇಶ್ ಪರ ರೋಡ್ ಶೋ ಮೂಲಕ ಪ್ರಚಾರ ನಡೆಸಿದ ಅವರು, ರಾಜ್ಯ ಸರಕಾರದ ಜನವಿರೋಧಿ ನಡವಳಿಕೆಗಳಿಗೆ ಜನರು ಬೇಸತ್ತಿದ್ದು, ಬಿಜೆಪಿ ಪರವಾಗಿ ಮತ ಚಲಾಯಿಸಲಿದ್ದಾರೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

ಈ ಹಿಂದೆ ಬಿಜೆಪಿ ಸರಕಾರವಿದ್ದಾಗ ಹೆಣ್ಣು ಮಕ್ಕಳ ಸಬಲೀಕರಣಕ್ಕೆ ಹಾಗೂ ಹೆಣ್ಣು ಮಗುವಿನ ಬಗ್ಗೆ ಇರುವ ತಾರತಮ್ಯ ತೊಲಗಿಸಲು ಬಿ,ಎಸ್,ವೈ ಭಾಗ್ಯಲಕ್ಷ್ಮೀ ಯೋಜನೆಯನ್ನು ಜಾರಿಗೆ ತಂದಿದ್ದರು. ಆದರೆ ಸಿದ್ದರಾಮಯ್ಯ ನೇತೃತ್ವದ ಸರಕಾರ ಭಾಗ್ಯಲಕ್ಷ್ಮಿ ಯೋಜನೆಯನ್ನು ಮೂಲೆಗುಂಪು ಮಾಡಿದೆ. ದುರಂತವೆಂದರೆ ಪ್ರತಿ ಬಾರಿ ಕೇಂದ್ರದಲ್ಲಿರುವ ಸರಕಾರದ ಪಕ್ಷ ರಾಜ್ಯದಲ್ಲಿ ಬರುವುದಿಲ್ಲ. ಆದರೆ ಈ ಬಾರಿಯ ಚುನಾವಣೆಯಲ್ಲಿ ಮತದಾರರು ಬಿಜೆಪಿಗೆ ಮತ ಹಾಕುವುದರ ಮೂಲಕ ರಾಜ್ಯದಲ್ಲಿ ಬಿಜೆಪಿ ಸರಕಾರ ರಚಿಸಲು ಸಹಕಾರಿಯಾಗಬೇಕು ಎಂದರು.

ಮಹಿಳೆಯರನ್ನು ಅಣೆ ಪ್ರಮಾಣಗಳ ಮೂಲಕ ಮಾನಸಿಕವಾಗಿ ಕುಗ್ಗಿಸಲು ಸಾಧ್ಯವಿಲ್ಲ, ಭಾರತದ ಸಂವಿಧಾನವೇ ನಮ್ಮ ಧರ್ಮಗ್ರಂಥ. ನಿಮ್ಮ ಮನಸಾಕ್ಷಿಗೆ ಅನುಗುಣವಾಗಿ ಮತ ಚಲಾಯಿಸಿ ಎಂದ ಅವರು, ತುಮಕೂರು ನಗರದ ಅಭಿವೃದ್ದಿ ಬಿಜೆಪಿಯಿಂದ ಮಾತ್ರ ಸಾಧ್ಯ ಎಂದರು.   

ರೋಡ್ ಶೋನಲ್ಲಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷರಾದ ಸರೋಜ ಗೌಡ, ಮಹಾನಗರಪಾಲಿಕೆ ಸದಸ್ಯೆ ವಿಜಯ ರುದ್ರೇಶ್, ನಗರಧ್ಯಕ್ಷ ಸಿ,ಎನ್, ರಮೇಶ್, ಪ್ರಧಾನ ಕಾರ್ಯದರ್ಶಿ ಹೆಚ್,ಎಂ, ರವೀಶ್ ಯಜಮಾನ್ ಗಂಗಹನುಮಯ್ಯ, ಅರುಣ್ ಕುಮಾರ್, ಪ್ರೇಮಾ ಹೆಗ್ಡೆ, ವಿಜಯಭಾಸ್ಕರ್, ವೀಣಾ, ಜಿ,ಆರ್, ಪ್ರಕಾಶ್, ಆಟೋ ಯಡಿಯೂರಪ್ಪ, ಸಿದ್ದರಾಜು, ಮಹೇಶ್, ನಾಗರಾಜು, ವಿಠಲ, ಶಿವರಾಜು, ಮೋಹನ್, ಉಪೇಂದ್ರ ಕುಮಾರ್, ವರದರಾಜು, ಅಮಿತ್, ರತ್ನಮ್ಮ, ಕಮಲಮ್ಮ, ರವಿ ಮುಂತಾದವರು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News