ಮೂವರು ಸಹೋದ್ಯೋಗಿಗಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಬಿಎಸ್ಎಫ್ ಯೋಧ

Update: 2018-05-06 06:29 GMT

ಹೊಸದಿಲ್ಲಿ, ಮೇ 6: ಗಡಿಭದ್ರತಾ ಪಡೆ(ಬಿಎಸ್ಎಫ್)ಯ ಜವಾನ ತನ್ನ ಮೂವರು ಸಹೋದ್ಯೋಗಿಗಳನ್ನು ಗುಂಡಿಟ್ಟು ಕೊಂದು ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡ ಘಟನೆ  ತ್ರಿಪುರಾದ ಉನಕೊಟಿ ಜಿಲ್ಲೆಯ ಮಗುರುಲಿ ಎಂಬಲ್ಲಿ ರವಿವಾರ ನಡೆದಿದೆ

ಓರ್ವ ಬಿಎಸ್ ಎಫ್ ಜವಾನ  ತನ್ನ ಸರ್ವಿಸ್ ರಿವಾಲ್ವರ್ ನಿಂದ  ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿದ ಪರಿಣಾಮವಾಗಿ  ಓರ್ವ ಹೆಡ್ ಕಾನ್ ಸ್ಟೇಬಲ್ ಸ್ಥಳದಲ್ಲೇ ಮೃತಪಟ್ಟರು. ಗಾಯಗೊಂಡ ಇಬ್ಬರು ಜವಾನರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು.

ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿದ ಬಳಿಕ ಬಿಎಸ್ ಎಫ್ ಜವಾನ  ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News