ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು ನಂಬರ್ ಒನ್ ಆಗಿ ಹೊರಹೊಮ್ಮಲಿದೆ: ಶಿವಸೇನೆ ಸಂಸದ ಸಂಜಯ್ ರಾವತ್
Update: 2018-05-06 09:45 GMT
ಮುಂಬೈ, ಮೇ 6: ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು ನಂಬರ್ ಒನ್ ಆಗಿ ಹೊರಹೊಮ್ಮಲಿದೆ ಎಂದು ಶಿವಸೇನೆ ಸಂಸದ ಸಂಜಯ್ ರಾವತ್ ಹೇಳಿದ್ದಾರೆ.
ಮುಂದಿನ ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿಯೊಂದಿಗಿನ ಶಿವಸೇನೆಯ ‘ಹೊಂದಾಣಿಕೆ’ಯ ಹೊರತಾಗಿಯೂ 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಪಕ್ಷವು ಮೈತ್ರಿ ಮಾಡಿಕೊಳ್ಳುತ್ತದೆ ಎಂದು ಭಾವಿಸಬೇಕಾಗಿಲ್ಲ ಎಂದವರು ಸ್ಪಷ್ಟಪಡಿಸಿದರು.
“ವಿಧಾನಸಭೆ ಚುನಾವಣೆ ಎಲ್ಲೆಲ್ಲಿ ನಡೆಯುತ್ತದೆಯೋ ಸಂಪೂರ್ಣ ಕೇಂದ್ರ ಆಡಳಿತ, ಹಾಗು ಬಿಜೆಪಿ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳು ಅಲ್ಲಿಗೆ ತೆರಳುತ್ತಾರೆ. ಈ ಮೂಲಕ ಕೇಂದ್ರ ಸರಕಾರ ಹಾಗು ರಾಜ್ಯ ಸರಕಾರಗಳ ಆಡಳಿತವು ತತ್ತರಿಸುತ್ತದೆ. ಇದೆಲ್ಲವನ್ನೂ ದೇಶ ನೋಡುತ್ತಿದೆ” ಎಂದು ರಾವತ್ ಹೇಳಿದರು.