ಸಚಿವ ಅನಂತಕುಮಾರ್ ಹೆಗಡೆ ಕಾರು ಅಪಘಾತ

Update: 2018-05-07 08:20 GMT

ಕಾರವಾರ, ಮೇ 7: ಕೇಂದ್ರ ಸಚಿವ ಅನಂತ ಕುಮಾರ್ ಹೆಗಡೆಯ ಕಾರು ಇಂದು ಬೆಳಗ್ಗೆ ಮತ್ತೆ ಅಪಘಾತಕ್ಕೀಡಾಗಿದೆ. ಸಚಿವರಿದ್ದ ಕಾರು ಕುಮಟಾ ತಾಲೂಕಿನ ಕತಗಾಲ ಎಂಬಲ್ಲಿ ತನ್ನದೇ ಬೆಂಗಾವಲು ವಾಹನಕ್ಕೆ ಢಿಕ್ಕಿಯಾಗಿದೆ. ಈ ಸಂದರ್ಭ ಯಾರಿಗೂ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ.

ಸಚಿವರು ಶಿರಸಿಯಿಂದ ಹೊನ್ನಾವರದ ಕೆಕ್ಕಾರ ಎಂಬಲ್ಲಿಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಇಲ್ಲಿನ ಯಾಣ ಕ್ರಾಸ್ ಬಳಿ ಓಮ್ನಿ ಕಾರೊಂದು ಅನಂತಕುಮಾರ ಹೆಗಡೆಯವರ ಬೆಂಗಾವಲು ವಾಹನಕ್ಕೆ ಅಡ್ಡ ಬಂತೆನ್ನಲಾಗಿದೆ. ಈ ವೇಳೆ ಬೆಂಗಾವಲು ವಾಹನದ ಚಾಲಕ ಏಕಾಏಕಿ ಬ್ರೇಕ್ ಹಾಕಿದ್ದಾನೆ. ಈ ವೇಳೆ ಅದರ ಬೆನ್ನಲ್ಲೇ ಇದ್ದ ಸಚಿವರ ಕಾರು ಬೆಂಗಾವಲು ವಾಹನಕ್ಕೆ ಢಿಕ್ಕಿಯಾಗಿದೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಸಚಿವರು ಸೇರಿದಂತೆ ಯಾರಿಗೂ ಯಾವುದೇ ಗಾಯಗಳಾಗಿಲ್ಲ.

ಈ ಹಿಂದೆ ಹಾವೇರಿ ಜಿಲ್ಲೆಯಲ್ಲಿ ಸಚಿವ ಅನಂತಕುಮಾರ್ ಹೆಗಡೆ ತೆರಳುತ್ತಿದ್ದ ವಾಹನ ಅಪಘಾತಕ್ಕಿಡಾಗಿತ್ತು. ಇದು ಬಳಿಕ ಭಾರೀ ವಿವಾದವನ್ನೇ ಸೃಷ್ಟಿಸಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News