ಸೌದಿ: ಭ್ರಷ್ಟಾಚಾರ ಬಯಲಿಗೆಳೆಯುವವರ ರಕ್ಷಣೆಗೆ ರಾಜಾಜ್ಞೆ

Update: 2018-05-07 17:27 GMT

ರಿಯಾದ್, ಮೇ 7: ಭ್ರಷ್ಟಾಚಾರ ಪ್ರಕರಣಗಳನ್ನು ಬಹಿರಂಗಪಡಿಸುವವರಿಗೆ ರಕ್ಷಣೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡುವ ಆದೇಶವೊಂದನ್ನು ಸೌದಿ ಅರೇಬಿಯದ ದೊರೆ ಸಲ್ಮಾನ್ ಹೊರಡಿಸಿದ್ದಾರೆ ಎಂದು ಸೌದಿ ಪ್ರೆಸ್ ಏಜನ್ಸಿ ವರದಿ ಮಾಡಿದೆ.

ಭ್ರಷ್ಟಾಚಾರ ಪ್ರಕರಣಗಳನ್ನು ಬಯಲಿಗೆಳೆದವರನ್ನು ಕೆಟ್ಟದಾಗಿ ನಡೆಸಿಕೊಂಡಿರುವ ಪ್ರಕರಣಗಳು ವರದಿಯಾದ ಬಳಿಕ ದೊರೆ ಈ ರಾಜಾಜ್ಞೆಯನ್ನು ಹೊರಡಿಸಿದ್ದಾರೆ.

‘‘ಭ್ರಷ್ಟಾಚಾರ ಪ್ರಕರಣಗಳನ್ನು ವರದಿ ಮಾಡುವ ಸರಕಾರಿ ಅಧಿಕಾರಿಗಳು ಉದ್ಯೋಗ ಅಭದ್ರತೆ, ಸೌಲಭ್ಯ ಮತ್ತು ಹಕ್ಕು ವಂಚನೆ ಬೆದರಿಕೆಗಳಿಗೆ ಒಳಗಾಗದಂತೆ ನೋಡಿಕೊಳ್ಳುವುದಕ್ಕಾಗಿ ರಾಜಾಜ್ಞೆ ಜಾರಿಗೆ ಬಂದಿದೆ’’ ಎಂದು ಸೌದಿ ರಾಷ್ಟ್ರೀಯ ಭ್ರಷ್ಟಾಚಾರ ನಿಗ್ರಹ ಆಯೋಗದ ಅಧ್ಯಕ್ಷ ಖಾಲಿದ್ ಅಲ್ ಮುಹೈಸಿನ್ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News