ಅಮಿತ್ ಶಾಗೆ ಕಾಂಗ್ರೆಸ್ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ: ರಾಹುಲ್ ಗಾಂಧಿ
Update: 2018-05-08 07:30 GMT
ಬೆಂಗಳೂರು, ಮೇ 8: ಕೊಲೆ ಪ್ರಕರಣಯೊಂದರ ಆರೋಪಿಯಾಗಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಗೆ ಕಾಂಗ್ರೆಸ್ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದರು.
ಮಂಗಳವಾರ ನಗರದ ಖಾಸಗಿ ಹೋಟೆಲ್ ನಲ್ಲಿ 'ಸಮೃದ್ಧ ಭಾರತ' ಸಂವಾದದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ನೀಡಿದ ಯಾವುದೇ ಭರವಸೆಗಳನ್ನೂ ಈಡೇರಿಸಿಲ್ಲ. ಉದ್ಯೋಗ ಸೃಷ್ಟಿ ಮಾಡುವಲ್ಲಿಯೂ ಅವರು ವಿಫಲರಾಗಿದ್ದಾರೆ. ಈ ಬಗ್ಗೆ ಯುವ ಸಮುದಾಯಕ್ಕೆ ಅವರು ಉತ್ತರ ನೀಡಬೇಕು ಎಂದರು.
‘ಗಣಿ ಅಕ್ರಮದಲ್ಲಿ ಭಾಗಿಯಾಗಿ ಕೋಟ್ಯಂತರ ಮೊತ್ತ ಲೂಟಿ ಮಾಡಿದ ರೆಡ್ಡಿ ಸಹೋದರನ್ನು ಜೊತೆಗಿಟ್ಟು ಬಿಜೆಪಿ ಚುನಾವಣೆ ಎದುರಿಸುತ್ತಿದೆ ಎಂದು ಆರೋಪಿಸಿದ ರಾಹುಲ್, ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.