ಪ್ರಸನ್ನ ಕುಮಾರ್ ಪಂಡಿತ್
Update: 2018-05-08 14:25 GMT
ಉಡುಪಿ, ಮೇ 8: ಪ್ರಗತಿಪರ ಕೃಷಿಕ, ಉಡುಪಿ ಜಿಲ್ಲಾ ಕೃಷಿಕ ಸಂಘ ಜಿಲ್ಲಾ ಸಮಿತಿ ಸದಸ್ಯರಾದ ಪ್ರಸನ್ನಕುಮಾರ್ ಪಂಡಿತ್ (52) ಇವರು ಮಂಗಳವಾರ ಹೃದಯಾಘಾತದಿಂದ ಮುಂಡುಜೆಯ ತಮ್ಮ ಸ್ವಗೃಹದಲ್ಲಿ ನಿಧನರಾದರು.
ಜನಾನುರಾಗಿಯಾಗಿದ್ದ ಇವರು ಹಿರಿಯಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘದ ಆಡಳಿತ ಮಂಡಳಿ ಸದಸ್ಯ ಹಾಗೂ ಹಿರಿಯಡ್ಕ ಬ್ರಾಹ್ಮಣ ಮಹಾಸಭಾದ ಕಾರ್ಯಕಾರಿಣಿ ಸದಸ್ಯರಾಗಿಯೂ ಕಾರ್ಯನಿರ್ವಹಿಸುತ್ತಿದ್ದರು. ಇವರು ಪತ್ನಿ ಮತ್ತು ಓರ್ವ ಪುತ್ರ ಸಹಿತ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.