ಪತ್ರಕರ್ತನ ಮೇಲೆ ಬಾಟಲ್ ಎಸೆದು ಹಲ್ಲೆಗೆ ಯತ್ನಿಸಿದ ಬಿಜೆಪಿ ಕಾರ್ಯಕರ್ತರು: ಆರೋಪ

Update: 2018-05-10 11:23 GMT

ಬಂಟ್ವಾಳ, ಮೇ 10: ಇಲ್ಲಿನ ಬಿಸಿ ರೋಡ್ ನಲ್ಲಿ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಪರ ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ರೋಡ್ ಶೋ ನಡೆಸುತ್ತಿದ್ದ ವೇಳೆ ಪತ್ರಕರ್ತರೊಬ್ಬರಿಗೆ ಬಿಜೆಪಿ ಕಾರ್ಯಕರ್ತರು ಬಾಟಲ್ ಎಸೆದು, ಹಲ್ಲೆಗೆ ಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಬಿ.ಸಿ.ರೋಡ್ ನಲ್ಲಿ ಆದಿತ್ಯನಾಥ್ ರೋಡ್ ಶೋ ವೇಳೆ ಕಾಂಗ್ರೆಸ್ ಅಭ್ಯರ್ಥಿ ರಮಾನಾಥ ರೈಯವರ ಕಾರು ಹಾದು ಹೋಯಿತು. ಈ ಸಂದರ್ಭ ತಾನು ರಮಾನಾಥ ರೈ ಜೊತೆ ಮಾತನಾಡಿದೆ. ಇದೇ ಕೋಪದಿಂದ ಬಿಜೆಪಿ ಕಾರ್ಯಕರ್ತರು ತನ್ನ ಮೇಲೆ ಬಾಟಲ್ ಎಸೆದು ಹಲ್ಲೆಗೆ ಯತ್ನಿಸಿದ್ದಾರೆ ಎಂದು ಸುದ್ದಿ ಸಂಸ್ಥೆಯ ಪತ್ರಕರ್ತರೊಬ್ಬರು ಆರೋಪಿಸಿದ್ದಾರೆ.

ಬಿಜೆಪಿ ಕಾರ್ಯಕರ್ತರು ಪತ್ರಕರ್ತರು ವರದಿಗಾರಿಕೆ ಮಾಡದಂತೆಯೂ ಅಡ್ಡಿಪಡಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂದರ್ಭ ಬಿಜೆಪಿಯ ಹಿರಿಯ ನಾಯಕರು ಮಧ್ಯ ಪ್ರವೇಶಿಸಿ ಕಾರ್ಯಕರ್ತರನ್ನು ಸಮಾಧಾನಗೊಳಿಸಿದರು ಎನ್ನಲಾಗಿದೆ.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News