×
Ad

ಮೂಡಿಗೆರೆ: ವಿದ್ಯುತ್ ತಂತಿ ತಗುಲಿ ರೈತ ಮೃತ್ಯು

Update: 2018-05-11 22:25 IST

ಮೂಡಿಗೆರೆ, ಮೇ.11: ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ರೈತನೋರ್ವ ಮೃತಪಟ್ಟ ಘಟನೆ ತಾಲೂಕಿನ ಕೆಸವೊಳಲು ಗ್ರಾಮದಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದೆ.

ಗ್ರಾಮದ ಶ್ರೀನಿಧಿ (35) ಎಂಬುವರೆ ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಬುಧವಾರ ರಾತ್ರಿ ಗುಡುಗು ಸಹಿತ ಭಾರಿ ಮಳೆಯಾಗಿದ್ದರಿಂದ ಶೀನಿಧಿ ಅವರ ಕಾಫಿ ತೋಟದಲ್ಲಿ ಮರದ ರೆಂಬೆಗಳು ಮುರಿದು ವಿದ್ಯುತ್ ತಂತಿ ಮೇಲೆ ಬಿದ್ದಿದ್ದು, ಅದನ್ನು ಗಮನಿಸದೆ ಗುರುವಾರ ತನ್ನ ತೋಟದಲ್ಲಿ ಕೆಲಸ ಮಾಡುತ್ತಿರುವಾಗ ವಿದ್ಯುತ್ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ಪತ್ನಿ, ಓರ್ವ ಪುತ್ರಿಯನ್ನು ಅಗಲಿದ್ದಾರೆ. 

ಮೂಡಿಗೆರೆ ಎಂಜಿಎಂ ಸರಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಈ ಕುರಿತು ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News