ಕಾರ್ಯಕರ್ತರಲ್ಲಿ ಹುರುಪು ತುಂಬಿದ ಜನಪ್ರತಿನಿಧಿ, ತಾರೆಯರ ಮತದಾನ

Update: 2018-05-12 15:04 GMT

ಬೆಂಗಳೂರು, ಮೇ 12: ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ವಗ್ರಾಮ ಸಿದ್ದರಾಮನ ಹುಂಡಿ, ಬಿಜೆಪಿ ರಾಜ್ಯಾಧ್ಯಕ್ಷ ಶಿಕಾರಿಪುರದಲ್ಲಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ರಾಮನಗರದ ಮಾಗಡಿ ಕ್ಷೇತ್ರದಲ್ಲಿ ಮತಚಲಾಯಿಸಿ, ತಮ್ಮ ಕಾರ್ಯಕರ್ತರಿಗೆ ಹುರುಪು ತುಂಬಿದರು.

ಶನಿವಾರ ನಡೆದ ಮತದಾನದಲ್ಲಿ ಮಧ್ಯಾಹ್ನದ ಒಳಗೆ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್‌ನ ಪ್ರಮುಖ ನಾಯಕರು ಮತದಾನದ ಮಾಡುವ ಮೂಲಕ ತಮ್ಮ ಕಾರ್ಯಕರ್ತರಿಗೆ ಮತದಾನ ಮಾಡಲು ಪ್ರೇರಣೆ ನೀಡಿದರು. ಜನಪ್ರತಿನಿಧಿಗಳ ಜೊತೆಗೆ ಹೆಚ್ಚಿನ ಸಂಖ್ಯೆಯಲ್ಲಿ ಸಿನೆಮಾ ತಾರೆಯರು ಮತಗಟ್ಟೆಗಳಲ್ಲಿ ಬಂದಿದ್ದು ವಿಶೇಷ ಕಳೆ ತಂದುಕೊಟ್ಟತು.

ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ವಕ್ಷೇತ್ರವಾದ ಸಿದ್ದರಾಮನಹುಂಡಿಯಲ್ಲಿ ತಮ್ಮ ಮಗ ವರುಣಾ ಕ್ಷೇತ್ರದ ಅಭ್ಯರ್ಥಿ ಯತೀಂದ್ರರೊಂದಿಗೆ ಮತಗಟ್ಟೆಗೆ ಆಗಮಿಸಿದ ಅವರನ್ನು ಅಪಾರ ಅಭಿಮಾನಿಗಳು ಸುತ್ತುವರೆದು, ಜೈಕಾರ ಹಾಕಿದರು. ಮತದಾನ ಮಾಡಿದ ನಂತರ ಮಾತನಾಡಿದ ಅವರು, ಪ್ರಜಾಪ್ರಭುತ್ವದ ಯಶಸ್ವಿಗೆ ಮತದಾನ ಅಗತ್ಯವಾಗಿದ್ದು, ಪ್ರತಿಯೊಬ್ಬರು ಮತದಾನ ಮಾಡಿ ಎಂದು ಕರೆ ನೀಡಿದರು.

ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮತದಾನ ಮಾಡಲು ರಾಮನಗರದ ಮಾಗಡಿ ಕ್ಷೇತ್ರಕ್ಕೆ ಬರುತ್ತಿದ್ದಂತೆ ನೂರಾರು ಸಂಖ್ಯೆಯ ಅಭಿಮಾನಿಗಳು ಸುತ್ತುವರೆದು ಶುಭ ಹಾರೈಸಿದರು. ಮತದಾನ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಯವನ್ನು ವ್ಯರ್ಥ್ಯ ಮಾಡದೆ ಪ್ರತಿಯೊಬ್ಬರು ಮತದಾನ ಶೀಘ್ರವೆ ಮಾಡಿ ಎಂದು ತಮ್ಮ ಕಾರ್ಯಕರ್ತರಿಗೆ ಮನವಿ ಮಾಡಿದರು.

ಇನ್ನುಳಿದಂತೆ ಕಾಂಗ್ರೆಸ್‌ನ ನಾಯಕ ಮಲ್ಲಿಕಾರ್ಜುನ ಖರ್ಗೆ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಕೇಂದ್ರ ಸಚಿವ ಅನಂತಕುಮಾರ್, ಡಿ.ಕೆ.ಶಿವಕುಮಾರ್, ದಿನೇಶ್‌ಗುಂಡೂರಾವ್ ಸೇರಿದಂತೆ ಸಚಿವರು, ಶಾಸಕರು ಹಾಗೂ ವಿವಿಧ ಪಕ್ಷಗಳ ಜನಪ್ರತಿನಿಧಿಗಳು ತಮ್ಮ ಸ್ವ ಕ್ಷೇತ್ರಗಳಲ್ಲಿ ಮತದಾನ ಮಾಡುವ ಮೂಲಕ ಮತದಾರರಿಗೆ ಪ್ರೇರಣೆಯಾದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News