ಬೆಂಗಳೂರು: ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

Update: 2018-05-13 13:04 GMT

ಬೆಂಗಳೂರು, ಮೇ 13: ಕರ್ನಾಟಕ ತಿಗಳರ ಸಾರ್ವಜನಿಕ ವಿದ್ಯಾಭಿವೃದ್ಧಿ ಸಂಘದ ವಿದ್ಯಾರ್ಥಿ ನಿಲಯಗಳಲ್ಲಿ ವಿದ್ಯಾಭ್ಯಾಸ ಮಾಡಬಯಸುವ ತಿಗಳ ಸಮುದಾಯದ ಮತ್ತು ಇತರೆ ಸಮುದಾಯಗಳ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ವಿಜಯನಗರದಲ್ಲಿರುವ ಬಾಲಕಿಯರ ವಿದ್ಯಾರ್ಥಿನಿಲಯ ಹಾಗೂ ರಾಜಾಜಿನಗರ ಬಾಲಕರ ವಿದ್ಯಾರ್ಥಿ ನಿಲಯಗಳಿಗೆ 2018-19ನೆ ಸಾಲಿನಲ್ಲಿ ಪದವಿ, ಸ್ನಾತಕೋತ್ತರ ಪದವಿ, ಪದವಿ ಪೂರ್ವ, ವೃತ್ತಿಪರ ಕೋರ್ಸ್, ತಾಂತ್ರಿಕ ಮತ್ತು ವೈದ್ಯಕೀಯ ತರಗತಿಯಲ್ಲಿ ಅಧ್ಯಯನ ಮಾಡುವವರು ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಆಸಕ್ತಿಯುಳ್ಳವರು ಮೇ 20ರೊಳಗೆ ಅರ್ಜಿ ಪಡೆದುಕೊಂಡು, ಮೇ30 ರೊಳಗೆ ಅರ್ಜಿ ಸಲ್ಲಿಸಬೇಕು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News