ಐಟಿ ಅಧಿಕಾರಿಗಳಿಗೆ ಜೀವ ಬೆದರಿಕೆ: ರಕ್ಷಣೆ ಕೋರಿ ರಾಜ್ಯ ಮುಖ್ಯ ಕಾರ್ಯದರ್ಶಿಗೆ ಪತ್ರ

Update: 2018-05-13 14:43 GMT

ಬೆಂಗಳೂರು, ಮಾ 13: ಕರ್ನಾಟಕ ವಿಧಾನಸಭಾ ಚುನಾವಣಾ ವೇಳೆ ಆದಾಯ ತೆರಿಗೆ ಇಲಾಖೆ(ಐಟಿ) ಅಧಿಕಾರಿಗಳಿಗೆ ಜೀವ ಬೆದರಿಕೆ ಬಂದ ಹಿನ್ನೆಲೆಯಲ್ಲಿ ರಕ್ಷಣೆ ಕೋರಿ ಗೋವಾ ಮತ್ತು ಕರ್ನಾಟಕದ ಆದಾಯ ತೆರಿಗೆ ಇಲಾಖೆಯ ತನಿಖಾ ನಿರ್ದೇಶಕ (ಡಿಜಿ) ಬಿ.ಆರ್. ಬಾಲಕೃಷ್ಣ ರಾಜ್ಯ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.

ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಏಕಾಏಕಿ ದಾಳಿ ನಡೆಸಿದ ಪ್ರತಿಯಾಗಿ ನಮಗೆ ಕಿಡಿಗೇಡಿಗಳು ಜೀವ ಬೆದರಿಕೆ ಹಾಕುತ್ತಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಚುನಾವಣೆಗೂ ಮುನ್ನ ಕೆಲವರ ಮೇಲೆ ಐಟಿ ಅಧಿಕಾರಿಗಳ ದಾಳಿ ನಡೆದಿತ್ತು. ಈ ಕಾರಣಕ್ಕಾಗಿಯೇ ಐಟಿ ಅಧಿಕಾರಿಗಳಿಗೆ ರಕ್ಷಣೆ ಕೋರಿ ರಾಜ್ಯ ಮುಖ್ಯ ಕಾರ್ಯದರ್ಶಿ ಮತ್ತು ರಾಜ್ಯ ಪೊಲೀಸ್ ಮಹಾ ನಿರ್ದೇಶರಿಗೆ ಬಾಲಕೃಷ್ಣ ಪತ್ರ ಬರೆದಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News