ಕುಂಞಲಿಮ ಅಡೂರು

Update: 2018-05-14 18:07 GMT

ಮಂಗಳೂರು, ಮೇ 14: ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ (ಕೆಯುಐಡಿಎಫ್‌ಸಿ)ದ ಆಡಳಿತ ನಿರ್ದೇಶಕ ಎ.ಬಿ.ಇಬ್ರಾಹೀಂ ಅವರ ತಾಯಿ, ಕಾಸರಗೋಡು-ಅಡೂರು ನಿವಾಸಿ ಕುಂಞಲಿಮ ಮುಹಮ್ಮದ್ (96) ಸೋಮವಾರ ರಾತ್ರಿ 8:30ರ ಸುಮಾರಿಗೆ ನಿಧನರಾಗಿದ್ದಾರೆ.

ಅನಾರೋಗ್ಯದ ಕಾರಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಕುಂಞಲಿಮ ಇಂದು ರಾತ್ರಿ ಕೊನೆಯುಸಿರೆಳೆದಿದ್ದಾರೆ. ಮೃತರು ಏಳು ಮಂದಿ ಪುತ್ರರು, ನಾಲ್ವರು ಪುತ್ರಿಯರ ಸಹಿತ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

ಮೃತರ ದಫನ ಕಾರ್ಯವು ಮಂಗಳವಾರ ಅಪರಾಹ್ನ 2 ಗಂಟೆಗೆ ಅಡೂರು ಜುಮಾ ಮಸೀದಿ ವಠಾರದಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ