ಜೆಡಿಎಸ್ ಗೆ ಬೆಂಬಲ ನೀಡುತ್ತೇವೆ ಎಂಬ ಕಾಂಗ್ರೆಸ್ ಹೇಳಿಕೆಯ ಬಗ್ಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ
Update: 2018-05-15 10:41 GMT
ಬೆಂಗಳೂರು, ಮೇ 15: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರವನ್ನು ಸಂಪೂರ್ಣವಾಗಿ ಸೋಲಿಸಿ, ಬಿಜೆಪಿಯನ್ನು ಅತಿ ಹೆಚ್ಚು ಸ್ಥಾನಗಳಲ್ಲಿ ಗೆಲ್ಲಿಸಿದ ಕರ್ನಾಟಕದ ಜನತೆಗೆ ನಾವು ಧನ್ಯವಾದ ಸಲ್ಲಿಸುತ್ತಿದ್ದೇವೆ ಎಂದು ಬಿಜೆಪಿ ನಾಯಕ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಸರಕಾರವರನ್ನು ಜನರು ತಿರಸ್ಕರಿಸಿದ್ದಾರೆ. ಸಿದ್ದರಾಮಯ್ಯನವರು ತಮ್ಮ ಸ್ವಂತ ಕ್ಷೇತ್ರ ಚಾಮುಂಡೇಶ್ವರಿಯಲ್ಲಿ ಸೋಲನುಭವಿಸಿದ್ದಾರೆ. ಆದರೆ ಸೋತ ಮೇಲೂ ವಾಮಮಾರ್ಗದ ಕುತಂತ್ರಗಳನ್ನು ಮಾಡುತ್ತಿರುವುದನ್ನು ನಾವು ಖಂಡಿಸುತ್ತೇವೆ. ರಾಷ್ಟ್ರೀಯ ನಾಯಕತ್ವದಲ್ಲಿ ಸಮಾಲೋಚನೆ ನಡೆಸಿ ತೀರ್ಮಾನ ಕೈಗೊಳ್ಳಲಿದ್ದೇವೆ ಎಂದವರು ಹೇಳಿದರು.
ಕಾಂಗ್ರೆಸ್ ವಿರೋಧಿ ಅಲೆಯಿಂದ ಜೆಡಿಎಸ್ ಕ್ಷೇತ್ರಗಳ ಸಂಖ್ಯೆ ಗಣನೀಯವಾಗಿ ಹೆಚ್ಚಿದ್ದು, ಕಾಂಗ್ರೆಸ್ ಸೋತ ನಂತರ ಹಿಂಬಾಗಿಲಿನಿಂದ ಅಧಿಕಾರ ಹಿಡಿಯಲು ಪ್ರಯತ್ನಿಸುವುದನ್ನು ನಾವು ಖಂಡಿಸುತ್ತೇವೆ ಎಂದವರು ಹೇಳಿದರು.