ಪಾಕ್‌ನಿಂದ ಕದನ ವಿರಾಮ ಉಲ್ಲಂಘನೆ : ಬಿಎಸ್‌ಎಫ್ ಯೋಧ ಸಾವು

Update: 2018-05-15 18:06 GMT

ಜಮ್ಮು, ಮೇ 15: ಜಮ್ಮುವಿನ ಸಾಂಬಾ ವಲಯದಲ್ಲಿ ಅಂತಾರಾಷ್ಟ್ರೀಯ ಗಡಿಗುಂಟ ಸೋಮವಾರ ಪಾಕಿಸ್ತಾನ ಸೇನೆ ನಡೆಸಿದ ಕದನ ವಿರಾಮ ಉಲ್ಲಂಘನೆಯಲ್ಲಿ ಗುಂಡು ತಗುಲಿ ಗಾಯಗೊಂಡಿದ್ದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್ ಮೃತಪಟ್ಟಿದ್ದಾರೆ. ಮೃತಪಟ್ಟ ಯೋಧನನ್ನು ದೇವೇಂದ್ರ ಸಿಂಗ್ ಎಂದು ಗುರುತಿಸಲಾಗಿದೆ.

‘‘ಸಾಂಬಾದಲ್ಲಿರುವ 173 ಬೆಟಾಲಿ ಯನ್‌ನ ಮಾಂಗುಚಕ್ ಐಬಿ ಸಮೀಪ ಪಾಕಿಸ್ತಾನ ನಡೆಸಿದ ಕದನ ವಿರಾಮ ಉಲ್ಲಂಘನೆಯಲ್ಲಿ ದೇವೇಂದ್ರ ಸಿಂಗ್ ಗಾಯಗೊಂಡಿದ್ದರು.’’ ಎಂದು ಬೇಹುಗಾರಿಕಾ ಅಧಿಕಾರಿಗಳು ತಿಳಿಸಿದ್ದಾರೆ. ಅವರನ್ನು ಸೇನಾ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಗಡಿ ಭದ್ರತಾ ಪಡೆಯ ಹಿರಿಯ ಅಧಿಕಾರಿ ತಿಳಿಸಿದ್ದಾರೆ. ಪೂಂಛ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಗುಂಟ ಮೇ 10ರಂದು ಪಾಕಿಸ್ತಾನ ಸೇನೆ ನಡೆಸಿದ ಗುಂಡಿನ ದಾಳಿಯಲ್ಲಿ 22 ವರ್ಷದ ನಾಗರಿಕರೋರ್ವರು ಮೃತಪಟ್ಟಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News