ಇವಿಎಂ ದುರುಪಯೋಗ: ದ.ಕ. ಜಿಲ್ಲಾದ್ಯಂತ ಪ್ರತಿಭಟನೆಗೆ ಎಸ್‌ಡಿಪಿಐ ಕರೆ

Update: 2018-05-16 12:37 GMT

ಮಂಗಳೂರು, ಮೇ 16: ರಾಜ್ಯ ವಿಧಾನಸಭಾ ಚುನಾವಣೆಯ ಮತ ಎಣಿಕೆಯಲ್ಲಿ ಇವಿಎಂ ದುರುಪಯೋಗವಾಗಿದೆ. ಹಲವು ಕ್ಷೇತ್ರಗಳ ಫಲಿತಾಂಶಗಳಲ್ಲಿ ಏರುಪೇರಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲುಗೊಳಿಸಿದ ಈ ಇವಿಎಂ ವಿರುದ್ಧವಾಗಿ ಎಸ್‌ಡಿಪಿಐ ಪಾರದರ್ಶಕ ಚುನಾವಣೆ ನಮ್ಮ ಹಕ್ಕು ‘ಬ್ಯಾನ್ ಇವಿಎಂ-ಪ್ರಜಾಪ್ರಭುತ್ವ ಉಳಿಸಿ’ಎಂಬ ಘೋಷಣೆಯೊಂದಿಗೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ.

ಅದರಂತೆ ಮೇ 19ರಂದು ಸುಳ್ಯ, ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಮಂಗಳೂರಿನಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಎಸ್‌ಡಿಪಿಐ ದ.ಕ. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಕ್ಬಾಲ್ ಬೆಳ್ಳಾರೆ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News