ಕಾಂಗ್ರೆಸ್ ಶಾಸಕರು ಬಿಜೆಪಿಗೆ ಹೋಗಲ್ಲ: ಶಾಮನೂರು ಶಿವಶಂಕರಪ್ಪ

Update: 2018-05-16 13:29 GMT

ಬೆಂಗಳೂರು, ಮೇ 16: ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾಗಿರುವ ಲಿಂಗಾಯತ ಸಮುದಾಯದ ಯಾವೊಬ್ಬ ಶಾಸಕರೂ ಬಿಜೆಪಿ ಪಕ್ಷಕ್ಕೆ ಹೋಗುವುದಿಲ್ಲ ಎಂದು ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ವೀರಶೈವ ಮಹಾಸಭಾ ಅಧ್ಯಕ್ಷನಾಗಿ ಈ ಮಾತು ಹೇಳುತ್ತಿದ್ದು, ನಮ್ಮ ಪಕ್ಷದ ಯಾವ ಶಾಸಕರು ಕೂಡಾ ಬಿಜೆಪಿಯ ಆಮಿಷಗಳಿಗೆ ಬಲಿಯಾಗುವುದಿಲ್ಲ ಎಂದರು.

ಬಿಜೆಪಿ ಶಾಸಕರು ಸಂಪರ್ಕದಲ್ಲಿದ್ದಾರೆ: ಕಾಂಗ್ರೆಸ್ ಪಕ್ಷದ ಯಾವ ಶಾಸಕರು ಬಿಜೆಪಿಗೆ ಹೋಗುವುದಿಲ್ಲ. ಒಂದು ವೇಳೆ ಅವರು ಆಪರೇಷನ್ ಕಮಲಕ್ಕೆ ಮುಂದಾದರೆ, ನಮ್ಮ ಸಂಪರ್ಕದಲ್ಲಿಯೂ ಬಿಜೆಪಿಯ 6 ಶಾಸಕರಿದ್ದಾರೆ. ಅವರು ಯಾರು ಎಂಬುದನ್ನು ಈಗಲೇ ಹೇಳುವುದಿಲ್ಲ. ಸಮಯ ಬಂದಾಗ ಅವರಾಗಿಯೆ ಜನರ ಮುಂದೆ ಬರುತ್ತಾರೆ ಎಂದು ಶಾಸಕ ಎಂ.ಬಿ.ಪಾಟೀಲ್ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News