ಕುದುರೆ ವ್ಯಾಪಾರದ ಬಗ್ಗೆ ಕಾಂಗ್ರೆಸ್, ಜೆಡಿಎಸ್ ಆರೋಪ ಆಧಾರ ರಹಿತ: ಪ್ರಕಾಶ್ ಜಾವಡೇಕರ್

Update: 2018-05-16 13:46 GMT

ಬೆಂಗಳೂರು, ಮೇ 16: ಕುದುರೆ ವ್ಯಾಪಾರದ ಬಗ್ಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಮಾಡಿರುವ ಆರೋಪ ಆಧಾರ ರಹಿತವಾದದ್ದು ಎಂದು ಬಿಜೆಪಿಯ ರಾಜ್ಯ ಉಸ್ತುವಾರಿ ಪ್ರಕಾಶ್ ಜಾವಡೇಕರ್ ಇಂದಿಲ್ಲಿ ಹೇಳಿದರು.

ಬುಧವಾರ ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಕುದುರೆ ವ್ಯಾಪಾರದಲ್ಲಿ ತೊಡಗಿಲ್ಲ. ಅವರದ್ದೇ (ಜೆಡಿಎಸ್ ಮತ್ತು ಕಾಂಗ್ರೆಸ್) ಪಕ್ಷದ ಶಾಸಕರು ಮೈತ್ರಿ ಬಗ್ಗೆ ಅಸಮಾಧಾನ ಹೊಂದಿದ್ದಾರೆ ಎಂದರು.

100 ಕೋಟಿ ರೂ. ಆಮಿಷವೊಡ್ಡಿದ ಆರೋಪ ಮಾಡಲಾಗಿದೆ. ಆಧಾರ ರಹಿತ ಆರೋಪ ಮಾಡುವ ಮೂಲಕ ಕಾಂಗ್ರೆಸ್ ಮತ್ತು ಜೆಡಿಎಸ್ ರಾಜಕೀಯ ಮಾಡುತ್ತಿವೆ ಎಂದು ಜಾವಡೇಕರ್ ದೂರಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News