ಕಾಂಗ್ರೆಸ್ ನಾಯಕರಿಂದ ದೂರವಾಣಿ ಕದ್ದಾಲಿಕೆ: ಬಿಜೆಪಿ ಆರೋಪ

Update: 2018-05-16 14:44 GMT

ಬೆಂಗಳೂರು, ಮೇ 16: ರಾಜ್ಯದಲ್ಲಿ ಆಡಳಿತ ನಡೆಸಿದ ಕಾಂಗ್ರೆಸ್ ನಾಯಕರು ತಮ್ಮ ಅಧಿಕಾರ ದುರುಪಯೋಗ ಪಡಿಸಿಕೊಂಡು ಬಿಜೆಪಿ ನಾಯಕರ ದೂರವಾಣಿ ಕದ್ದಾಲಿಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಬಿಜೆಪಿ ದೂರು ನೀಡಿದೆ.

ಬುಧವಾರ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ದೂರು ನೀಡಿರುವ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ, ರಾಜ್ಯದಲ್ಲಿ ಮೇ 12 ರಂದು ಚುನಾವಣೆ ನಡೆದು ಮೇ 15 ರಂದು ಫಲಿತಾಂಶ ಪ್ರಕಟಗೊಂಡಿದೆ. ಸರಕಾರ ರಚಿಸುವ ಕಸರತ್ತು ಮುಂದುವರೆದಿದೆ. ಆದರೆ, ಆಡಳಿತ ನಡೆಸಿದ ಕಾಂಗ್ರೆಸ್ ಸರಕಾರ ಅಧಿಕಾರ ದುರ್ಬಳಕೆ ಮಾಡಿಕೊಂಡು ಬಿಜೆಪಿ ನಾಯಕರ ದೂರವಾಣಿ ಕರೆಗಳ ಕದ್ದಾಲಿಕೆ ಮಾಡಲಾಗುತ್ತಿದೆ. ಇದು ಸಂವಿಧಾನ ಬದ್ಧವಾಗಿ ನೀಡಿರುವ ಖಾಸಗಿತನದ ಮೂಲಭೂತ ಹಕ್ಕಿನ ಸ್ಪಷ್ಟ ಉಲ್ಲಂಘನೆಯಾಗಿದೆ. ಕೂಡಲೇ ಈ ಸಂಬಂಧ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಪ್ರಾಧಿಕಾರಕ್ಕೆ ಸೂಚನೆ ನೀಡುವಂತೆ ದೂರಿನಲ್ಲಿ ಮನವಿ ಮಾಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News