ರಾಜಭವನದ ಹೊರಗೆ ಬಿಜೆಪಿ ವಿರುದ್ಧ ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ

Update: 2018-05-16 15:00 GMT

ಬೆಂಗಳೂರು, ಮೇ 16: ಜೆಡಿಎಸ್ ನೇತೃತ್ವದ ರಾಜ್ಯ ಸರಕಾರ ರಚನೆಗೆ ಅವಕಾಶ ಕೋರಿ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ರಾಜಭವನಕ್ಕೆ ತೆರಳಿದ್ದ ವೇಳೆ ಜೆಡಿಎಸ್ ಕಾರ್ಯಕರ್ತರು ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸಿದರು.

ಬುಧವಾರ ಸಂಜೆ ರಾಜಭವನಕ್ಕೆ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕರು, ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಶಾಸಕರು ರಾಜಭನಕ್ಕೆ ತೆರಳಿದ್ದರು. ಈ ವೇಳೆ ಜೆಡಿಎಸ್ ಕಾರ್ಯಕರ್ತರು ರಾಜಭವನದ ಹೊರಗೆ ಬಿಜೆಪಿ ವಿರುದ್ಧ ಪ್ರತಿಭಟನೆ ಮಾಡಿ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯಪಾಲ ವಜುಬಾಯಿ ವಾಲಾ ಅವರು ಶಾಸಕರ ಭೇಟಿಗೆ ಸಂಜೆ 5ಕ್ಕೆ ಸಮಯ ನೀಡಿದ್ದರು. ಸಮಯಕ್ಕೂ ಮುನ್ನವೇ ರಾಜಭವನ ಬಳಿ ತಲುಪಿದ ಎಚ್.ಡಿ.ಕುಮಾರಸ್ವಾಮಿ ಅವರ ಪ್ರವೇಶಕ್ಕೆ ಪೊಲೀಸರು ಅವಕಾಶ ನೀಡದೆ, ಪ್ರವೇಶ ದ್ವಾರದಲ್ಲಿಯೇ ತಡೆದರು. ಇದನ್ನು ಖಂಡಿಸಿದ ಜೆಡಿಎಸ್ ಕಾರ್ಯಕರ್ತರು ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News