ರಾಜ್ಯಪಾಲರರಿಗೆ ಪಕ್ಷಗಳ ಬಲಾಬಲ ಮಾಹಿತಿ ನೀಡಿದ ಮುಖ್ಯ ಚುನಾವಣಾಧಿಕಾರಿ

Update: 2018-05-16 15:23 GMT

ಬೆಂಗಳೂರು, ಮೇ 16: ರಾಜ್ಯದಲ್ಲಿ ಅತಂತ್ರ ವಿಧಾನಸಭೆ ರಚನೆಯಾಗಿರುವ ಹಿನ್ನೆಲೆಯಲ್ಲಿ ಬಿಜೆಪಿ, ಕಾಂಗ್ರೆಸ್-ಜೆಡಿಎಸ್ ಸರಕಾರ ರಚನೆ ಮಾಡಲು ತಮಗೆ ಆಹ್ವಾನ ನೀಡಬೇಕೆಂದು ಹಕ್ಕು ಮಂಡಿಸಿರುವ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾಧಿಕಾರಿ ಸಂಜೀವ್‌ ಕುಮಾರ್‌ರನ್ನು ಕರೆಸಿಕೊಂಡು ರಾಜ್ಯಪಾಲ ವಜುಭಾಯಿ ವಾಲಾ ಮಾಹಿತಿ ಪಡೆದುಕೊಂಡಿದ್ದಾರೆ.

ಬುಧವಾರ ರಾಜಭವನಕ್ಕೆ ಆಗಮಿಸಿದ ಮುಖ್ಯ ಚುನಾವಣಾಧಿಕಾರಿ ಸಂಜೀವ್‌ ಕುಮಾರ್, ಈ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಅಭ್ಯರ್ಥಿಗಳು, ಪಕ್ಷಗಳ ಬಲಾಬಲಗಳ ಕುರಿತು ರಾಜ್ಯಪಾಲರಿಗೆ ಮಾಹಿತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯಪಾಲರು ಯಾವ ಪಕ್ಷಕ್ಕೆ ಸರಕಾರ ರಚನೆಗೆ ಅಧಿಕೃತ ಆಹ್ವಾನ ನೀಡುತ್ತಾರೆ ಎಂಬ ಕುತೂಹಲ ಕೆರಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News